8:37 AM Tuesday3 - October 2023
ಬ್ರೇಕಿಂಗ್ ನ್ಯೂಸ್
ಅನಧಿಕೃತ ಕೃಷಿ ಕೀಟ ನಾಶಕ ಮಾರಾಟ: ಕೆಮಿಕಲ್ ಮಳಿಗೆಗೆ ಕೃಷಿ ಅಧಿಕಾರಿಗಳ ದಿಢೀರ್… ಹೈಕೋರ್ಟ್ ಆದೇಶ ಉಲ್ಲಂಘಿಸಿ ವಿದ್ಯಾರ್ಥಿಗಳ ಮರುಹಂಚಿಕೆಗೆ ಕ್ರಮ? ವೈದ್ಯಕೀಯ ಶಿಕ್ಷಣ ಸಚಿವ ಶರಣ್… ಕೆಜೆ ಹಳ್ಳಿ-ಡಿಜೆಹಳ್ಳಿ-ಹುಬ್ಬಳ್ಳಿ ಕೇಸ್ ಸಂದರ್ಭದಲ್ಲಿ ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿತ್ತು: ಕೇಂದ್ರ ಸಚಿವೆ… ಜೆಡಿಎಸ್- ಬಿಜೆಪಿ ಸಖ್ಯ: ಕೇಸರಿ ಪಾಳಯ ತೊರೆದು ದಳ ಸೇರಿದ್ದ ಮೂಡಿಗೆರೆ ಮಾಜಿ… ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು ಮೆಸ್ಕಾಂ ನಿರ್ಲಕ್ಷ್ಯ: ಹೆಮ್ಮಾಡಿ ಕಾಲು ದಾರಿಯಲ್ಲಿ ವಿದ್ಯುತ್ ಶಾಕ್ ತಗುಲಿ ದಂಪತಿ ದಾರುಣ… ಬೆಳಗಾವಿಯಲ್ಲಿ 2 ದಿನಗಳ ಮೋಡ ಬಿತ್ತನೆಗೆ ಚಾಲನೆ: 20 ಸಾವಿರ ಅಡಿ ಎತ್ತದರದಲ್ಲಿರುವ… ಶೃಂಗೇರಿ: ತುಂಗಾ ನದಿಯ ನಡುಗಡ್ಡೆಯಲ್ಲಿ ಪ್ರವಾಹಕ್ಕೆ ಸಿಲುಕಿದ ಇಬ್ಬರ ರಕ್ಷಣೆ; ಅಗ್ನಿ ಶಾಮಕ… ಕಾವೇರಿ ನದಿ ನೀರು ಹಂಚಿಕೆ ವಿವಾದ: ಅಥಣಿಯಲ್ಲಿ ಪ್ರತಿಭಟನೆ; ಮಾನವ ಸರಪಳಿ ಮಂಗಳೂರಿನಲ್ಲಿ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಬಸ್ ಶೆಲ್ಟರ್ ಇಲ್ಲ!: ಆದ್ಯತೆ ಮೇರೆಗೆ ನಿರ್ಮಾಣ…

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು