10:18 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು