1:27 PM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕೆಂಗೋ ಹನುಮಂತಪ್ಪ ನಿಧನ: ಹಲವು ಗಣ್ಯರ ಸಂತಾಪ

30/05/2021, 03:35

ವಿಜಯಪುರ(reporterkarnataka news);ದಾವಣಗೆರೆ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹಾಗೂ ಬಯಲು ಸೀಮೆಯ ಪ್ರದೇಶ ಅಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷ ಕೆಂಗೋ ಹನುಮಂತಪ್ಪ ಅವರು ನಿಧನರಾದರು.

ದಾವಣಗೆರೆ ಜಿಲ್ಲೆಯ ಚಿಕ್ಕಬೂದಿಹಾಳದವರಾದ ಹನುಮಂತಪ್ಪ ಅವರು ಕುರುಬರ ಸಂಘದ ಅಧ್ಯಕ್ಷರಾಗಿ ಸಮಾಜದ ಏಳಿಗೆಗೆ ಅಪಾರ ಕೊಡುಗೆ ನೀಡಿದ್ದಾರೆ.

ಬಯಲು ಸೀಮೆ ಪ್ರದೇಶ ಮಂಡಳಿಯ ಅಧ್ಯಕ್ಷರಾಗಿದ್ದಾಗ

ತಮ್ಮ ವೀವೆಚನಾ ಕೋಟದಡಿಯಲ್ಲಿ ಬರುವ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ನಡೆಸಿದ್ದಾರೆ.

ಶಿರನಾಳ ಗ್ರಾಮದ ಸಂ ನಂ 179 ರಲ್ಲಿ  ಹರಿವೂ ಹಳ್ಳಕ್ಕೆ ಅಡ್ಡಲಾಗಿ ಒಂದು ನಾಲ ಬದುಕೆ  2 ಲಕ್ಷ ರೂ. ಅನುದಾನ ಹಂಚಿಕೆ 

ಮಾಡಿದ್ದಾರೆ.  ಇದರಿಂದ ಇಲ್ಲಿರುವ ಕೋಳವೆ ಬಾವಿಯಲ್ಲಿ ಅಂತರ್ಜಲ ವೃದ್ದಿಯಾಯಿತು. 

ಇವರು ಎರಡು ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಎಂ ಎಲ್ ಎ ಹಾಗೂ ಎಂಪಿ ಟಿಕೆಟ್ ಗೆ ಪ್ರಯತ್ನಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶ್ಯಾಮನೂರು ಶಿವಶಂಕರಪ್ಪ ಅವರ ಆಪ್ತರಾಗಿದ್ದರು.

ಸದಾ ಹಸನ್ಮುಖಿಯಾದ ಅವರ ನಿಧನದಿಂದ ದೊಡ್ಡ ಮುಖಂಡನ ಕಳೆದುಕೊಂಡಂತಾಗಿದೆ. ದಾವಣಗೆರೆ ಜಿಲ್ಲಾ ಕುರುಬರ ಸಂಘ

ಹಾಗೂ ರಾಜ್ಯ ಕುರುಬರ ಸಂಘಕ್ಕೆ ಭಾರೀ ನಷ್ಟ ಉಂಟಾಗಿದೆ. ಇವರು ದಾವಣಗೆರೆ, ಬಳ್ಳಾರಿ ಮತ್ತು ಹಾವೆರಿ ಜಿಲ್ಲೆಯಲ್ಲಿ ಪ್ರಸಿದ್ಧರಾಗಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಮಂದಿ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು