4:50 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ಪುತ್ತೂರು: ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ವಿತರಣೆ

30/05/2021, 14:28

ಪುತ್ತೂರು(reporterkarnataka news);

ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಮತ್ತು ಪುತ್ತೂರು ನಗರ ಬಿಜೆಪಿ ಓಬಿಸಿ ಮೋರ್ಚಾ ವತಿಯಿಂದ ಇಂದು ಬೆಳಿಗ್ಗೆ ಪುತ್ತೂರು ನಗರಸಭೆಯ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣ ಹಾಗೂ ಸಿಹಿತಿನಿಸು ವಿತರಿಸಲಾಯಿತು. 

ಕೇಂದ್ರ ಸರ್ಕಾರದ ಎರಡನೇ ಅವಧಿಯ ಎರಡನೇ ವರ್ಷದ ಆಚರಣೆ ಸಂದರ್ಭದಲ್ಲಿ ‘ಸೇವಾ ಹಿ ಸಂಘಟನ್’ ಕಾರ್ಯಕ್ರಮದಲ್ಲಿ ಕೋವಿಡ್ ಕಾರ್ಯದಲ್ಲಿ ಮುಂಚೂಣಿ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಂಜೀವ ಮಠಂದೂರು, ದೇಶ ಸಂಕಷ್ಟ ಎದುರಿಸುವ ಸಂದರ್ಭದಲ್ಲಿ ನಗರ ಸ್ವಚ್ಛತೆಯ ಹೊಣೆಹೊತ್ತಿರುವ ಪೌರಕಾರ್ಮಿಕರು ನೆಮ್ಮದಿಯಿಂದ ಇರಬೇಕು ಹಾಗೂ ಕೇಂದ್ರ ಸರಕಾರ ನಿರಂತರ ಏಳು ವರ್ಷ ಆಡಳಿತ ನಡೆಸಿ ಜನರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದೆ. ಈ ಸಂದರ್ಭದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸುವ ಓಬಿಸಿ ಮೋರ್ಚಾದ ಕಾರ್ಯ ವೈಖರಿ ಶ್ಲಾಘನೀಯ ಎಂದರು.

ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ.

ನಾರಾಯಣ್ ಮಾತನಾಡಿ, ದೇಶದ ಸಂಕಷ್ಟ ಸಮಯದಲ್ಲಿ ಜನರ ಆರೋಗ್ಯ ಕಾಪಾಡುವುದರ ಜೊತೆಗೆ ಜನರೊಂದಿಗೆ ಇದ್ದು ‌ ಜನಸೇವೆ ಮಾಡಬೇಕು. ಈ ನಿಟ್ಟಿನಲ್ಲಿ ಬಿಜೆಪಿ ಸೇವಾ ಹಿ ಸಂಘಟನ್ ಹೆಸರಿನಲ್ಲಿ ನಾಲ್ಕು ದಿನಗಳ ಕಾಲ ನಿರಂತರ ಹಲವು ಸೇವಾಕಾರ್ಯವನ್ನು ನಡೆಸಲಿದೆ. ಪ್ರಧಾನಿ ನರೇಂದ್ರ ಮೋದಿ ಸರಕಾರ ದೇಶಕ್ಕೆ ಹೊಸ ದಿಕ್ಕನ್ನು ತೋರಿಸುವ ಮುಖಾಂತರ ಜನಾನುರಾಗಿ ಕೆಲಸ ನಿರ್ವಹಿಸಿದೆ ಎಂದರು. 

ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷರಾದ ವಿದ್ಯಾ ಆರ್. ಗೌರಿ, ಪೂಡಾ ಅಧ್ಯಕ್ಷ ಅಶೋಕ್ ಶೆಣೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಶಂಭು ಭಟ್, ಬಿಜೆಪಿ ಪುತ್ತೂರು ನಗರ ಪ್ರಧಾನ ಕಾರ್ಯದರ್ಶಿ ಯುವರಾಜ್,  ಜಯಶ್ರೀ ಶೆಟ್ಟಿ, ನಗರ ಓಬಿಸಿ ಮೋರ್ಚಾ ಅಧ್ಯಕ್ಷ ಶಿವರಾಮ ಸಪಲ್ಯ, ಪ್ರಧಾನ ಕಾರ್ಯದರ್ಶಿಗಳಾದ  ಜಯರಾಮ್ ಪೂಜಾರಿ, ದಿವಾಕರ ಆಚಾರ್ಯ, ನಗರಸಭಾ ಸದಸ್ಯರಾದ ಯಶೋಧ ಪೂಜಾರಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಸದಸ್ಯರಾದ ಸಂದೀಪ್ ಲೋಬೋ, ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು