10:23 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ಸೀಲ್ ಡೌನ್ : 12 ಮಂದಿ ಸೋಂಕಿರನ್ನು ಕೋವಿಡ್ ಕೇರ್ ಸೆಂಟರ್ ಗೆ ವರ್ಗಾವಣೆ 

31/05/2021, 19:39

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಅತಿ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಂಡ ಮಸ್ಕಿ ತಾಲೂಕಿನ ಹಿರೆದಿನ್ನಿ ಕ್ಯಾಂಪ್ ನಿಂದ 

ಕೊರೊನಾ ಸೋಂಕಿತರನ್ನು ಮಸ್ಕಿ ಕೋವಿಡ್ ಸೆಂಟರ್ ಗೆ  ಸಾಗಿಸುವಲ್ಲಿ ತಾಲೂಕು ಆಡಳಿತ ಯಶಸ್ವಿಯಾಗಿದೆ.

ಮಸ್ಕಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ, ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾತೋಡ್, ಪೊಲೀಸ್ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು 12 ಮಂದಿ ಸೋಂಕಿತರು ಮಸ್ಕಿಯ ಕೋವಿಡ್ ಸೆಂಟರ್ ಗೆ ಕಳುಹಿಸಿದ್ದಾರೆ.

ಹಿರೆದಿನ್ನಿ ಕ್ಯಾಂಪನ್ನು ಪೂರ್ತಿ ಸೀಲ್ ಡೌನ್ ಮಾಡಲಾಗಿದೆ. ಯಾರು ಒಳಗಡೆ ಹೋಗುವಂತಿಲ್ಲ ಯಾರು ಹೊರಗಡೆ ಬರುವಂತಿಲ್ಲ. ತಾಲೂಕು ಆಡಳಿತ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಸಲಿಂಗಪ್ಪ ಹೊಸಗೌಡರ್, ಕಾರ್ಯದರ್ಶಿ ಶರಣಯ್ಯ ಸ್ವಾಮಿ ತೋಳದಿನ್ನಿ ಸೇರಿದಂತೆ ತಾಲೂಕು ಆಡಳಿತ ನಿಗಾ ವಹಿಸಿದೆ. ಸಾರ್ವಜನಿಕರ ಮನೆಯಲ್ಲಿ ಇರಿ ಹೊರಗಡೆ ಬರಬೇಡಿ. ನಿಮ್ಮ ಜೀವನವನ್ನು ನೀವು ಉಳಿಸಿಕೊಳ್ಳಿ ಎನ್ನುವ ಮಾತುಗಳು ಕೇಳಿ ಬಂದಿದೆ. ಈ ಸಂದರ್ಭದ ಸಂತೋಷ್ ಹಿರೆದಿನ್ನಿ, ಕಂದಾಯ ನಿರೀಕ್ಷಕ ಶರಣಪ್ಪ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು