3:50 PM Thursday25 - April 2024
ಬ್ರೇಕಿಂಗ್ ನ್ಯೂಸ್
ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ…

ಇತ್ತೀಚಿನ ಸುದ್ದಿ

ಪ್ರತಿಯೊಬ್ಬರು ಧೃತಿಗೆಡದೆ ಆತ್ಮಸ್ಥೈರ್ಯದಿಂದ ಬದುಕು ಮುನ್ನಡೆಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಕರೆ

03/06/2021, 16:49

ನಾಗಮಂಗಲ(reporterkarnataka news): ಇಂದಿನ ಮಹಾಮಾರಿ ಕೊರೊನಾದಿಂದ ರಾಜ್ಯ ದೇಶ ಧೃತಿಗೆಟ್ಟಿದ್ದು, ಬದುಕುವ ಜೀವದ ಜೊತೆ ಇರಬೇಕು. ಯಾರು ಕೂಡ ಧೃತಿಗೆಡಬಾರದು ಎಂದು ಆದಿಚುಂಚನಗಿರಿಯ ಜಗದ್ಗುರು ಶ್ರೀ ನಿರ್ಮಲಾನಂದ ಸ್ವಾಮಿಗಳು ಕರೆ ನೀಡಿದರು.

ಅವರಿಂದ ನಾಗಮಂಗಲ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸಿ ಆರ್ ಎಸ್ .ಫೌಂಡೇಶನ್ ಹಮ್ಮಿಕೊಂಡಿದ್ದ ತುರ್ತು ವಾಹನ ಹಾಗೂ ಪೌರಕಾರ್ಮಿಕರಿಗೆ ಆಶಾ ಕಾರ್ಯಕರ್ತರಿಗೆ ಆಹಾರಕ್ಕೆ ಕಿಟ್ ನೀಡುವ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಇಂದು ದೇಶಾದ್ಯಂತ ಮಹಾಮಾರಿಯು ಹಬ್ಬಿರುವ ಹಿನ್ನೆಲೆಯಲ್ಲಿ ಬದುಕುವ ದಾರಿಯ ಹುಡುಕುತ್ತ ನಾವುಗಳು ಆತ್ಮಸ್ಥೈರ್ಯದಿಂದ ಧೃತಿಗೆಡದೆ ಧೈರ್ಯದಿಂದ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕೆಂದು ತಿಳಿಸಿದರು.

ನಾವುಗಳು ಮೊದಲನೆಯ ಅಲೆಯಲ್ಲಿ ಅಲ್ಪ ಪ್ರಮಾಣದ ಬದುಕು ಎದುರಿಸುತ್ತಿದ್ದು ಎರಡನೇ ಅಲೆ ಇಂದು ದೇಶ ವ್ಯಾಪಿಸಿ ಬದುಕುವ ಸಂಕಷ್ಟದ ಹಾದಿಯಲ್ಲಿದೆ.ನಾವುಗಳು ಹೆದರದೆ ಆತ್ಮವಿಶ್ವಾಸದಿಂದ ಮುಂಬರುವ ದಿನಗಳಲ್ಲಿ ಸಾಮಾಜಿಕ ಅಂತರದೊಂದಿಗೆ  ಬದುಕಬೇಕಾದ ಸ್ಥಿತಿ  ನಿರ್ಮಾಣವಾಗಿದೆ. ಇಂತಹ  ಇಕ್ಕಟ್ಟಿನಲ್ಲಿ ನಾವುಗಳೆಲ್ಲರೂ ಎಚ್ಚರದಿಂದ  ಇರಬೇಕಾದ ಅಗತ್ಯ ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಭಯಬೀತರಾಗದೆ ಆತ್ಮಹತ್ಯೆಯಂತಹ ಚಿಂತನೆಯನ್ನು ಕೈಬಿಟ್ಟು ಈ ರೋಗಮುಕ್ತ ಸಮಾಜವನ್ನು ನಿರ್ಮಾಣ ಮಾಡುವುದಕ್ಕೆ ಸಹಕರಿಸಬೇಕು. ಇದರ ಜೊತೆಗೆ ಬ್ಲಾಕ್ ಪಂಗಸ್ ರೋಗವು ಸಹ ಹರಡುತ್ತಿದ್ದು ಸಾರ್ವಜನಿಕರು ಆದಷ್ಟು ಸುರಕ್ಷಿತವಾಗಿ ಇರಬೇಕಾಗುತ್ತದೆ. ಈ ಕೊರೊನಾ ರೋಗವನ್ನು ನಿರ್ಮೂಲನ ಮಾಡಲು ಸರ್ಕಾರವು ಸಹ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಮುಂದಿನ ಹತ್ತು ದಿನಗಳಲ್ಲಿ ನಮ್ಮ ಆದಿಚುಂಚನಗಿರಿ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಪ್ಲಾಂಟನ್ನು ನಿರ್ಮಾಣ ಮಾಡುತ್ತಿದ್ದು ನಮ್ಮ ಆಸ್ಪತ್ರೆಯಲ್ಲಿ ಸಾವಿರ ರೋಗಿಗಳು ಬಂದರೂ ಸಹ ಚಿಕಿತ್ಸೆಯನ್ನು ನೀಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಬೇಕು ಎಂದು ತಿಳಿಸಿದರು

ನಾಗಮಂಗಲದ ಮಾಜಿ ಶಾಸಕರಾದ ಚೆಲುವರಾಯಸ್ವಾಮಿ ಅವರು, ಸಿ.ಆರ್.ಎಸ್ ಫೌಂಡೇಶನ್ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು