4:51 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಇನ್ನೂ ಅಭಿವೃದ್ಧಿ ಕಾಣದ ಮಸ್ಕಿಯ ಅಶೋಕ ಶಿಲಾಶಾಸನದ ತಾಣ: ಇಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯವೇ ಇಲ್ಲ!!

05/06/2021, 07:34

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ.ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಅಶೋಕ ಶಿಲಾಶಾಸನ ಬಹಳ ವರ್ಷಗಳಿಂದ ಅಭಿವೃದ್ಧಿ ಯಾಗದೆ ಹಾಗೆ ಉಳಿದುಬಿಟ್ಟಿದೆ. ಇತಿಹಾಸದಲ್ಲಿ ಮಸ್ಕಿ ಅಶೋಕ ಶಿಲಾಶಾಸನ ಪ್ರಸಿದ್ಧಿಯಾಗಿದೆ. ರಾಜ್ಯದಲ್ಲಿ ಪ್ರವಾಸಿಗರು ಅಶೋಕ ಶಿಲಾಶಾಸನ ವೀಕ್ಷಿಸಲು ದೂರದ ಊರಿನಿಂದ ಬರುತ್ತಾರೆ. ಆದರೆ ಸೌಕರ್ಯ ಮಾತ್ರ ಶೂನ್ಯ.

ಇಲ್ಲಿ ಯಾತ್ರಿಕರಿಗೆ ಶುದ್ಧವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಯಾತ್ರಿಕರಿಗೆ ಸರಿಯಾದ ಶೌಚಾಲಯಗಳಿಲ್ಲ. ದೂರದ ಊರಿಂದ ಬರುವರಿಗೆ ಆಲಮಟ್ಟಿ ತರಹದ ಉದ್ಯಾನವನ ಇಲ್ಲ. ಈಗಾಗಲೇ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಶಾಸಕರಾಗಿರುವಾಗ ಸಚಿವರು , ಸಂಸದರು, ಶಾಸಕರು ಸೇರಿದಂತೆ ಅನೇಕರು ಗುದ್ಲಿ ಪೂಜೆ ನೆರವೇರಿಸಿದ್ದರು.  ಏಕೆ ಏನೂ ಗೊತ್ತಿಲ್ಲ. ಆದರೂ ಮಸ್ಕಿ ಅಶೋಕ ಶಿಲಾಶಾಸನ ಇನ್ನು ಅಭಿವೃದ್ಧಿ ಕಾಣದೆ ಹಾಗೆ ಉಳಿದುಬಿಟ್ಟಿದೆ. ಇಂದಿನ ದಿನದಲ್ಲಿ ಪುರಾತತ್ವ ಇಲಾಖೆ ಪ್ರವಾಸೋದ್ಯಮ ಇಲಾಖೆ ಏಕೆ ಗಮನಹರಿಸುತ್ತಿಲ್ಲ. ಎಲ್ಲಾ ಕಡೆ ಎಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಆದರೆ ಮಸ್ಕಿ ನಾಡಿಗೆ ಅಶೋಕನ ಶಿಲಾ ಶಾಸನ ಅಭಿವೃದ್ಧಿಯಾಗದೆ ಹಾಗೆ ಉಳಿದಿದ್ದು ದುರ ಕಷ್ಟಕರ ಸಂಗಾತಿ ಎಂದು ಯಾತ್ರಿಕರು ಅಭಿಪ್ರಾಯಪಡುತ್ತಾರೆ.

ಜನಪ್ರತಿನಿಧಿಗಳು, ಸಚಿವರು, ಮುಖ್ಯಮಂತ್ರಿಗಳು ಉಪ ಚುನಾವಣೆ ನಿಮಿತ್ತ ಮಸ್ಕಿಗೆ ಬಂದಾಗ ಅವರು ಗಮನಕ್ಕೆ ಬಂದಿಲ್ಲವೇನೋ ಎಂದು ಜನ ಮಾತನಾಡಿಕೊಳ್ಳುತ್ತಾರೆ. ಅದು ಏನೇ ಇರಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಇದಕ್ಕೆ ಸಂಬಂಧಪಟ್ಟ ಪ್ರವಾಸೋದ್ಯಮ ಇಲಾಖೆ ಜನರಿಗೆ ಶುದ್ಧವಾದ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಬೇಕು. ಯಾತ್ರಿಕರಿಗಾಗಿ ಹೈಟೆಕ್ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಬೇಕು. ಯಾತ್ರಿಕರಿಗಾಗಿ ಯಾತ್ರಿಕ ನಿಲಯಗಳ ಮಾಡಬೇಕೆನ್ನುವುದು ಒತ್ತಾಯವಾಗಿದೆ. ನೂತನವಾಗಿ ಆಯ್ಕೆಯಾದ ಮಸ್ಕಿ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಇದಕ್ಕೆ ಗಮನಹರಿಸಬೇಕೆಂದು ನಾಗರಿಕರು ಒತ್ತಾಯಿಸುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು