6:26 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ, ವಿದೇಶಕ್ಕೆ ತೆರಳುವ ಉದ್ಯೋಗಿಗಳಿಗೆ ಲಸಿಕೆ ನೋಂದಣಿ ಆರಂಭ: ಶಾಸಕ ವೇದವ್ಯಾಸ ಕಾಮತ್

05/06/2021, 19:20

ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಿಂದ ಉದ್ಯೋಗಕ್ಕಾಗಿ, ರಜೆಯಲ್ಲಿದ್ದು ವಾಪಸ್ಸು ಕರ್ತವ್ಯಕ್ಕೆ ತೆರಳುವ ಸೈನಿಕರಿಗೆ ಅಥವಾ ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ವಿತರಣೆ ಕಾರ್ಯ ನಾಳೆ ನಗರದ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ದಕ್ಷಿಣ ವತಿಯಿಂದ ಕೆಲ ದಿನಗಳ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ನನಗೆ ಸೈನಿಕರಿಗೆ, ಉದ್ಯೋಗ ಮತ್ತು ವಿಧ್ಯಾಭ್ಯಾಸಕ್ಕಾಗಿ ವಿದೇಶ, ಅನ್ಯರಾಜ್ಯಗಳಿಗೆ ತೆರಳುವವರಿಗೆ ಲಸಿಕೆ ನೀಡುವ ಕುರಿತು ಮನವಿ ಸಲ್ಲಿಸಿದ್ದರು. ಈ ಬಗ್ಗೆ ಸಂಸದರು ಹಾಗೂ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಅವರೊಂದಿಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಇದಕ್ಕಾಗಿ ಆನ್ ಲೈನ್ http://dk.nic.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಅಲ್ಲಿ ನೀಡಿರುವ ವಿಭಾಗಗಳಲ್ಲಿ ನೋಂದಾಯಿಸಿಕೊಂಡು ಬೇಕಾಗುವ ದಾಖಲೆಗಳನ್ನು ಭರ್ತಿ ಮಾಡಬೇಕು. ಆನಂತರ ಅರ್ಜಿ ಸಲ್ಲಿಸಿದವರಿಗೆ ದೂರವಾಣಿಯ ಮೂಲಕ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಎಲ್ಲಾ ಚಟುವಟಿಕೆಗಳ ಪೂರ್ಣ ಜವಬ್ದಾರಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಾರಾಗಿರುವ ಪ್ರಭಾಕರ್ ಶರ್ಮ ಅವರು ಹೊತ್ತಿದ್ದಾರೆ. ಹಂತ ಹಂತವಾಗಿ ಲಸಿಕೆ ವಿತರಣೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿರುವ ನನ್ನ ಕಚೇರಿಯನ್ನು, ಪ್ರಭಾಕರ್ ಶರ್ಮಾ ಅವರನ್ನು ಅಥವ ರೆಡ್ ಕ್ರಾಸ್‌ ಸಂಸ್ಥೆಯ ಪ್ರಮುಖರಾದ ಶಾಂತರಾಮ್ ಶೆಟ್ಟಿ ಅವರನ್ನು ಸಂಪರ್ಕಿಸಬಹುದು. ಅಗತ್ಯವಿರುವವರು ಕೂಡಲೇ ನೋಂದಾಯಿಸಿಕೊಳ್ಳುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು