12:14 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು…

ಇತ್ತೀಚಿನ ಸುದ್ದಿ

ರೋಹಿಣಿ ಸಿಂಧೂರಿ ವರ್ಗಾವಣೆ: ಮುಮ್ಮೇಳದಲ್ಲಿ ಸಚಿವರು, ಸಂಸದರು, ಶಾಸಕರು; ಹಿಮ್ಮೇಳದಲ್ಲಿ ಸರಕಾರಿ ಅಧಿಕಾರಿಗಳು !!

06/06/2021, 18:05

ಶ್ರದ್ಧಾ ಎಸ್. ಪಾಟೀಲ್ ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲು ಅವರು ಅಧಿಕಾರ ಸ್ವೀಕಾರ ಮಾಡಿದಂದಿನಿಂದ ಪ್ರಯತ್ನಗಳು ನಡೆಯುತ್ತಲೇ ಇತ್ತು. ಇದಕ್ಕೆ ಓರ್ವ ಸಂಸದ, ಉಸ್ತುವಾರಿ ಸಚಿವರು, ಅರ್ಧ ಡಜನಿಗೂ ಅಧಿಕ ಶಾಸಕರು, 5 ಡಜನಿಗೂ ಹೆಚ್ಚು ಕಾರ್ಪೊರೇಟರ್ ಗಳು ಸರಕಾರದ ಮೇಲೆ ಸದಾ ಒತ್ತಡ ಹೇರಿದ್ದರು. ಇದರ ಜತೆಗೆ ಜಿಲ್ಲೆಯ ಹಲವು ಮಂದಿ ಅಧಿಕಾರಿಗಳು ಕೂಡ ಹಿಮ್ಮೇಳದಲ್ಲಿ ಸಾಥ್ ನೀಡಿದ್ದರು !

ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ನಡೆದಿದೆ. ಧಾರ್ಮಿಕ ದತ್ತಿ ಇಲಾಖೆಗೆ ಹೊಸ ಆಯುಕ್ತರಾಗಿ ಅವರನ್ನು ನೇಮಿಸಲಾಗಿದೆ. ಆದರೆ ವಿಶೇಷವೆಂದರೆ ರೋಹಿಣಿ ಸಿಂಧೂರಿ ಅವರು ಎಲ್ಲಿ ಹೋದರೂ ಸುದ್ದಿ ಮಾಡುತ್ತಲೇ ಇರುತ್ತಾರೆ. ಮಂಗಳೂರಿನಲ್ಲಿ ಪ್ರೊಬೇಷನರಿ ಎಸಿಯಾಗಿದ್ದಾಗಲೇ ಕಟೀಲು ದೇವಳ ವಿಷಯದಲ್ಲಿ ಸದ್ದು ಮಾಡಿದ್ದರು. ಮೌನವಾಗಿ ಕೆಲಸ ಮಾಡುವ ಛಾತಿಯೇ ಅವರಲಿಲ್ಲ. ಒಂದು ರೀತಿಯಲ್ಲಿ ವಿವಾದವನ್ನು ಮೈಗೆ ಎಳೆದುಕೊಳ್ಳುತ್ತಿದ್ದ ಅಧಿಕಾರಿ ಅವರು.

ಹಾಸನದಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗಲೂ ಅಲ್ಲಿನ ಸ್ಥಳೀಯ ಮಾಂಡಲಿಕರು ಜತೆ ಕಾದಾಡಿದ್ದರು. ಎಚ್.ಡಿ. ರೇವಣ್ಣ ಮತ್ತು ಸಿಂಧೂರಿ ನಡುವೆ ಸದಾ ಜಟಾಪಟಿ ನಡೆಯುತ್ತಲೇ ಇತ್ತು. ಶಾಸಕ ಎ. ಮಂಜು ಅವರು ರೋಹಿಣಿ ಸಿಂಧೂರಿ ಕಾಲ ಮೇಲೆ ಕಾಲು ಹಾಕಿ ಕೂರುತ್ತಾರೆ ಎಂದು ಆಗಾಗ ದೂರುತ್ತಿದ್ದರು.

ಓರ್ವ ಮಹಿಳಾ ಐಎಎಸ್ ಅಧಿಕಾರಿ ಕಾಲ ಮೇಲೆ ಕಾಲು ಹಾಕಿ ಕೂರುವುದನ್ನು ಒಪ್ಪದ ಮನಸ್ಥಿತಿ, ಒಬ್ಬ ಸಾಮಾನ್ಯ ಮಹಿಳೆ ಕಾಲ ಮೇಲೆ ಕಾಲಿಕ್ಕಿದರೆ ಸಹಿಸಿತೇ ಎಂಬ ಪ್ರಶ್ನೆ ಉದ್ಬವಿಸುತ್ತದೆ

ರಾಜಕಾರಣಿಗಳದ್ದು ಸದಾ ದೂರು. ಮಾಸ್ಕ್ ತೆಗೆದು ಮಾತನಾಡಿ ಎಂದು ಶಾಸಕ ಎನ್. ಮಹೇಶ್ ಅಜ್ಞಾಪಿಸುತ್ತಾರೆ. ಸಂಸದ ಪ್ರತಾಪ ಸಿಂಹ ಅವರು ಸ್ವಿಮ್ಮಿಂಗ್ ಫೂಲ್ ತಕರಾರು ಎತ್ತುತಾರೆ. ಇನ್ನು ಮೈಸೂರು ಮಹಾನಗರಪಾಲಿಕೆಯ ಕಾರ್ಪೊರೇಟರ್ ದೂರು ಪ್ರತಿದಿನ ಬೆಳಗಾದರೆ ಇರುತ್ತಿತ್ತು. ಒಟ್ಟಿನಲ್ಲಿ ರೋಹಿಣಿ ಸಿಂಧೂರಿ ವರ್ಗಾಣೆ ಹಿಂದೆ ಬಹಳಷ್ಟು ಪುರುಷ ಶಕ್ತಿಗಳು ಹೋರಾಟ ನಡೆಸಿದ್ದಾರೆ. ಏನಿದ್ದರೂ ಆಕೆ ಗಟ್ಟಿಗಿತ್ತಿ ಎಂದು ರೋಹಿಣಿ ಸಿಂಧೂರಿ ವರ್ಗಾವಣೆಗೆ ವಿರೋಧಿಸಿದ ಮೈಸೂರಿನ ಜನತೆ ಹೇಳಿಕೊಳ್ಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು