5:41 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ರವಿ ಡಿ. ಚೆನ್ನಣ್ಣನವರ್ ಸಹಿತ 12 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ 

09/06/2021, 19:00

ಬೆಂಗಳೂರು(reporterkarnataka news): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ರವಿ ಡಿ. ಚೆನ್ನಣ್ಣನವರ್, ಹನುಮಂತ ರಾವ್, ಆರ್. ಚೇತನ್ ಸೇರಿದಂತೆ 12 ಮಂದಿ ಐಪಿಎಸ್ ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್ಪಿ ಆಗಿದ್ದ ರವಿ ಡಿ. ಚೆನ್ನಣ್ಣನವರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ಸಿಐಡಿಗೆ ವರ್ಗಾಯಿಸಲಾಗಿದೆ. ಉಡುಪಿ ಕೋಸ್ಟಲ್ ಸೆಕ್ಯುರಿಟಿ ಪೊಲೀಸ್ ನ ಎಸ್ಪಿಯಾಗಿದ್ದ ಆರ್. ಚೇತನ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠರಾಗಿ ನೇಮಿಸಲಾಗಿದೆ. ಕೋಲಾರ ಜಿಲ್ಲಾ ಸುಪರಿಟೆಂಟ್ ಆಫ್ ಪೊಲೀಸ್ ಆಗಿದ್ದ ಕಾರ್ತಿಕ್ ರೆಡ್ಡಿ ಅವರನ್ನು ಬೆಂಗಳೂರಿನ ವಯರ್ ಲೆಸ್ ವಿಭಾಗಕ್ಕೆ ಎಸ್ಪಿ ಆಗಿ ವರ್ಗಾಯಿಸಲಾಗಿದೆ. ಬೆಂಗಳೂರಿನ ಅಪರಾಧ ತನಿಖಾ ವಿಭಾಗದ ಎಸ್ಪಿಯಾಗಿದ್ದ ರಾಹುಲ್ ಕುಮಾರ್ ಎಸ್. ಅವರನ್ನು ತುಮಕೂರು ಜಿಲ್ಲೆ ಎಸ್ ಪಿ ಆಗಿ ನೇಮಿಸಲಾಗಿದೆ. ದಾವಣಗೆರೆ ಜಿಲ್ಲಾ ಎಸ್ಪಿ ಹನುಮಂತರಾಯ ಅವರನ್ನು ಹಾವೇರಿ ಜಿಲ್ಲಾ ಎಸ್ಪಿ ಆಗಿ ವರ್ಗಾಯಿಸಲಾಗಿದೆ. ಒಟ್ಟು 12 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರಕಾರ ಆದೇಶ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು