9:50 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಆಲ್ಕೋಡ ಗ್ರಾಮ ಪಂಚಾಯಿತಿನಲ್ಲಿ ಭಾರಿ ಭ್ರಷ್ಟಾಚಾರ: ನಕಲಿ ಬಿಲ್ ಸೃಷ್ಟಿಸಿ 10 ಲಕ್ಷ ರೂ. ಗುಳುಂ: ನಡೆಯದ ಕಾಮಗಾರಿಯ ಹೆಸರಿನಲ್ಲೂ ಬಿಲ್! 

10/06/2021, 16:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ಸುಮಾರು 10 ಲಕ್ಷ ರೂ. ವಂಚಿಸಿದ ಆರೋಪ ಕೇಳಿ ಬಂದಿದೆ. ಈ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗೂ ದೂರು ನೀಡಲಾಗಿದೆ. 

ಆಲ್ಕೋಡ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ  ಪ್ರಕರಣ ಬೆಳಕಿಗೆ ಬಂದಿದ್ದು, ಸುಮಾರು 10 ಲಕ್ಷ ರೂ. ಗುಳಂ ಮಾಡಿರುವ ಆರೋಪ ಕೇಳಿ ಬಂದಿದೆ. ಶಾವಂತಗಲ್ ಗ್ರಾಮದ ಬೀದಿ ದೀಪಗಳ ಹೆಸರಿನಲ್ಲಿ 50 ಸಾವಿರ ರೂಪಾಯಿ, ಕುಡಿಯುವ ನೀರಿನ ನಿರ್ವಹಣೆಗೆ 40 ಸಾವಿರ ರೂ. ಹಾಗೂ ಇತರ ನಡೆಯದ ಕಾಮಗಾರಿಯ ನಕಲಿ ದಾಖಲೆ ಸೃಷ್ಟಿಸಿ ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಹನುಮಂತ ಶಾವಂತಗಲ್ ಹಾಗೂ  ಗ್ರಾಮ ಪಂಚಾಯಿತಿನ ಇತರ ಐವರು ಸದಸ್ಯರು ಆರೋಪಿಸಿದ್ದಾರೆ.

ಆಲ್ಕೋಡ ಗ್ರಾಮಗಳಲ್ಲಿ ಫಾಗಿಂಗ್ ನಡೆಸಿದ ಹೆಸರಿನಲ್ಲೂ ಹಣ ದುರುಪಯೋಗ ಮಾಡಲಾಗಿದೆ. 15ನೇ ಹಣಕಾಸು ಯೋಜನೆಯಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿದನ್ನು ಇತರ ಸದಸ್ಯರ ಗಮನಕ್ಕೆ ತರಲಿಲ್ಲ. ಪಂಚಾಯಿತಿ ಅಧ್ಯಕ್ಷರು ಹಾಗೂ

 ಅಭಿವೃದ್ಧಿ ಅಧಿಕಾರಿ ಸೇರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು  ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೂರು ನೀಡಲಾಗಿದೆ. ಅವ್ಯವಹಾರ ಬಗ್ಗೆ ದೂರು ಬಂದಿದೆ. ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಾಪಂ ಕಾರ್ಯನಿರ್ವಾಹಣಾಧಿಕಾರಿ ಪಂಪಾಪತಿ ಹಿರೇಮಠ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು