1:31 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ:  ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ

11/06/2021, 16:28

ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ.

ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲಂಕಾದಿಂದ ಭಾರತ ಪ್ರವೇಶಿಸಿದ್ದಾರೆ. ಪ್ರತಿಯೊಬ್ಬರಿಂದ 8-10 ಲಕ್ಷ ರೂ. ಏಜೆಂಟರು ಪಡೆದುಕೊಂಡಿದ್ದಾರೆ. ಭಾರತದ ಮೂಲಕ ಕೆನಡಾಕ್ಕೆ ಕಳುಹಿಸುವ ಭರವಸೆ ಇವರಿಗೆ ನೀಡಲಾಗಿತ್ತು.

ಮೊದಲಿಗೆ ಇವರನ್ನು ಕಳೆದ ತಿಂಗಳು ತಮಿಳುನಾಡಿಗೆ ಕರೆದು ತರಲಾಯಿತು. ಅಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಸುರಕ್ಷಿತವಲ್ಲ ಎಂದು ಮಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ತಿಳಿದು ಬಂದಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ತಪಾಸಣೆಯಿಲ್ಲದೆ ಅವರು ಹೇಗೆ ರಾಜ್ಯ ಪ್ರವೇಶಿಸಿದರು ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಮಂಗಳೂರಿನ ಲಾಡ್ಜ್ ಮತ್ತು ಬಾಡಿಗೆ ಮನೆಯೊಂದರಲ್ಲಿ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು