12:47 PM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಸರಕಾರ ಕೊಡುವ 3 ಸಾವಿರ ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ 

14/06/2021, 07:30

ಉಡುಪಿ(reporterkarnataka news): ಮೀನುಗಾರಿಕೆ ಇಂದು ಅಳಿವಿನಂಚಿಗೆ ಸರಿದಿದೆ. ಮೀನುಗಾರರ ಸಮಸ್ಯೆಗಳಿಗೆ ಸರಕಾರ ತುರ್ತು ಸ್ಪಂದಿಸಬೇಕಾಗಿದೆ. ಅದೇ ರೀತಿ ಮೀನುಗಾರಿಕೆ ಉಳಿವಿಗೆ ಏಕ ರೂಪದ ಕಾನೂನು ಜಾರಿಗೆ ತರುವ ಅಗತ್ಯವಿದೆ. ತಾನು ಮೀನುಗಾರಿಕೆ ಸಚಿವನಾಗಿದ್ದಾಗ ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದೆ. ಕೇಂದ್ರ ಕೃಷಿ ಸಚಿವರ ಜತೆ ಈ ಕುರಿತು ಚರ್ಚೆ ಕೂಡ ಮಾಡಿದ್ದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮೀನುಗಾರಿಕೆಗೆ ಬಳಸುವ ಡಿಸೇಲ್ ಬೆಲೆ ಇದೀಗ ಹೆಚ್ಚಳವಾಗಿದೆ. ಕೊರೊನಾದಿಂದ ರಫ್ತಿನ ಮೇಲೂ ಪರಿಣಾಮ ಬೀರಿದೆ. ನಮ್ಮ ಹೆಚ್ಚಿನ ಮೀನು ಉತ್ಪನ್ನಗಳು ಚೀನಾ ದೇಶಕ್ಕೆ ರಫ್ತಾಗುತ್ತದೆ. ಇದೀಗ ಅಲ್ಲಿಯೂ ಕೂಡ ಸಮಸ್ಯೆ ಏರ್ಪಟ್ಟಿದೆ ಇದು ಮೀನುಗಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವರು ಅಭಿಪ್ರಾಯಪಟ್ಟರು.

ರಾಜ್ಯ ಸರಕಾರ ಕೊಡುವ ಕೇವಲ 3 ಸಾವಿರ ರೂ. ಪರಿಹಾರದಿಂದ ಮೀನುಗಾರಿಕೆ ಉಳಿಸಲು ಸಾಧ್ಯವಿಲ್ಲ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಮೀನುಗಾರಿಕೆಗೆ ಪುನಶ್ಚೇತನ ನೀಡಬೇಕು. ಏಕ ರೂಪದ ಕಾನೂನು ತರದೆ ಹೋದರೆ ಮೀನುಗಾರಿಕೆ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮೀನುಗಾರಿಕೆ ಇದೇ ರೀತಿ ಮುಂದೆ ಸಾಗಿದರೆ ಮುಂದಿನ 10 ವರ್ಷಗಳಲ್ಲಿ ಮೀನುಗಾರಿಕೆ ಅವನತಿ ಹೊಂದುವ ಸಾಧ್ಯತೆಯ ಕುರಿತು ಭವಿಷ್ಯ ನುಡಿದಿದ್ದೆ. ಆದರೆ ಯಾರೂ ಗಂಭೀರವಾಗಿ ಇದನ್ನು ತೆಗೆದುಕೊಂಡಿರಲಿಲ್ಲ. ಇದೀಗ ದೋಣಿ ಹೊಂದಿರುವವರು, ಅವಲಂಬಿತರು, ಉದ್ದಿಮೆದಾರರು ಭೀತಿಗೊಳಗಾಗಿದ್ದಾರೆ. ಇದೇ ನೀತಿ ಸೂಕ್ತ ನಿರೂಪಣೆಯಿಲ್ಲದೆ ಮೀನುಗಾರಿಕೆ ಮುಂದುವರಿಸಿದರೆ ಅರಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿ ಸಂಪೂರ್ಣ ಬರಿದಾಗುವ ಸಾಧ್ಯತೆ ಇದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳು ಸರಕಾರ ಸೇರಿ ಧೃಢವಾದ ಸಂಕಲ್ಪ ಮಾಡಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮೀನುಗಾರಿಕೆಯ ಭವಿಷ್ಯ ಚಿಂತಾಜನಕವಾಗಲಿದೆಯೆಂದು ಅವರು ನುಡಿದರು.

ರಾಜ್ಯ ಸರಕಾರ ತಕ್ಷಣಕ್ಕೆ ಡಿಸೇಲ್ ಸಬ್ಸಿಡಿ ಬಿಡುಗಡೆ ಮಾಡಬೇಕು. ಮೀನಗಾರರಿಗೆ ಕೇಂದ್ರ ಸರಕಾರದ ಎಕ್ಸೆಸ್ ತೆರಿಗೆಯಾದ 33 ರೂಪಾಯಿಂದ ವಿನಾಯಿತಿ ನೀಡಬೇಕು. ಮೀನುಗಾರರಿಗೆ ಡಿಸೇಲ್ 50 ರೂಪಾಯಿ ಒಳಗೆ ಸಿಗುವಂತಾಗಬೇಕು. ಅದು ಮೀನುಗಾರರಿಗೆ ತಾತ್ಕಾಲಿಕ ಉಪಶಮನ ನೀಡುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು