4:51 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಸಿಂಧನೂರು: ಗಾಂಜಾ ತಪಾಸಣೆ ಎಂದು ರೈತನ ಅಡ್ಡಗಟ್ಟಿದ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ 48,500 ರೂ. ನಗದು ಲೂಟಿ

14/06/2021, 15:01

ಡಿ. ಶರಣ ಗೌಡ ಗೊರಬಾಳ್ ಸಿಂಧನೂರು

info.reporterkarnataka@gmail.com

ಸಿಂಧನೂನು ತಾಲೂಕಿನ ಸಾಸಲಮರಿ ಗ್ರಾಮದ ಸಮೀಪ ಬೈಕ್ ನಲ್ಲಿ ಬರುತ್ತಿದ್ದ ರೈತರೊಬ್ಬರನ್ನು ಅಡ್ಡಗಟ್ಟಿದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಅವರಿಂದ 48,500 ರೂ. ನಗದು ಎಗರಿಸಿದ್ದಾರೆ.

ಮಲ್ಕಪುರ ಗ್ರಾಮದ ಸುಮಾರು 60ರ ಹರೆಯದ ಪಂಪಣ್ಣ ಎಂಬ ರೈತರು ಗೊರೆಬಾಳ ಗ್ರಾಮದಿಂದ ಭತ್ತ ಮಾರಿದ(ನೆಲ್ಲ ಪಟ್ಟಿ)ಹಣವನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಲೂಟಿ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8.20 ಸುಮಾರಿಗೆ ಪಂಪಣ್ಣ ಅವರು ಶ್ರೀಪುರಂ ಜಂಕ್ಷನ್ ನಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ  ಪೆಟ್ರೋಲ್ ಹಾಕಿಸಿಕೊಂಡು ಎಕ್ಸೆಲ್ ಸೂಪರ್ ಬೈಕ್ ನಲ್ಲಿ ಮಲ್ಕಪುರ ಗ್ರಾಮಕ್ಕೆ ವಾಪಸಾಗುತ್ತಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಪಂಪಣ್ಣ ಅವರ ಬೈಕನ್ನು ತಡೆದು ನಿಲ್ಲಿಸಿ ಅಧಿಕಾರಿಗಳ ರೀತಿಯಲ್ಲಿ ‘ನೀನು ಗಾಂಜಾ ಸಾಗಣಿಕೆ ಮಾಡುತ್ತಿದ್ದು ನಿನ್ನನ್ನು ತಪಾಸಣೆ ತಪಾಸಣೆ ಮಾಡಬೇಕು’ ಎಂದು ಬೆದರಿಸಿ ರೈತನ ಬಳಿ ಇರುವ 48,500ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು