9:01 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ತೈಲ ಬೆಲೆಯೇರಿಕೆ: ಕೇಂದ್ರ ಸರಕಾರ ವಿರುದ್ಧ  ಈಚನಾಳ ಗ್ರಾಮ ಪಂಚಾಯತ್ ಮುಂದೆ ಕಾಂಗ್ರೆಸ್ ಪ್ರತಿಭಟನೆ 

14/06/2021, 14:46

ಅಮರೇಶ್  ಲಿಂಗಸುಗೂರು ರಾಯಚೂರು

info.reporterkarnataka@gmail.com

ಕೇಂದ್ರ ಸರಕಾರದ ತೈಲ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ ಈಚನಾಳ ಗ್ರಾಮದ ಗ್ರಾಮ ಪಂಚಾಯತ್ ಮುಂದೆ ‘100 ನಾಟೌಟ್’ ಪ್ರತಿಭಟನೆ ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಮೇಟಿ ನೇತೃತ್ವದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಆನಂದ ಕುಂಬಾರ ಮಾತನಾಡಿ,  ಕೊವಿಡ್-19 ಮಹಾಮಾರಿಯ ಹಿಡಿತಕ್ಕೆ ಸಿಕ್ಕಿ ಹೈರಾಣವಾಗಿರುವ ಜನಸಾಮಾನ್ಯರ ದುಸ್ಥಿತಿಯ ನಡುವೆಯೇ ಸಂವೇದನಾರಹಿತ ಕೇಂದ್ರ ಸರಕಾರದ ನೀತಿಗಳಿಂದ ಪೆಟ್ರೋಲ್ ಮತ್ತು ಡೀಸಿಲ್ ಬೆಲೆಗಳು ದಿನೇ ದಿನೇ ಏರುತ್ತಿದೆ. ಬಹಳ ಕಡೆ ಲೀಟರ್ ಒಂದರ ಬೆಲೆ ನೂರರ ಗಡಿ ದಾಟಿದೆ. ಇನ್ನುಳಿದ ಕಡೆ ನೂರರ ಹೊಸ್ತಿಲಲ್ಲಿದೆ. ಈ ಬೆಲೆ ಏರಿಕೆಯಿಂದಾಗಿ ಮನೆಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಕಳೆದ 13 ತಿಂಗಳುಗಳಲ್ಲಿ ಪೆಟ್ರೋಕ್ ಮತ್ತು ಡೀಸೆಲ್ ಬೆಲೆಗಳು ಲೀಟರ್‌ ತಲಾ ರೂಪಾಯಿ 25.72 ಮತ್ತು ರೂಪಾಯಿ 23.93 ರಷ್ಟು ಏರಿಕೆಯಾಗಿವೆ. ಕಳೆದ 5 ತಿಂಗಳುಗಳಲ್ಲಿ 43 ಬಾರಿ ದರಗಳನ್ನು ಏರಿಕೆಯಾಗಿದೆ ಎಂದು ಕಿಡಿ ಕಾರಿದರು.

ಕಾಂಗ್ರೆಸ್ ಮುಖಂಡರು ಪಿರಸಾಬ ಪಂಚಮ್, ಆದಪ್ಪ ಮೇಟಿ, ದೊಡ್ಡಪ್ಪ ಚಿಗರಿ, ಯಮನಪ್ಪ ಕಟ್ಟೀಮನಿ,  ಸಣ್ಣಗದ್ದೆಪ್ಪ ಚಿಗರಿ,ಮಲ್ಲರಡ್ಡೆಪ್ಪ ದೊಡ್ಡಮನಿ, ಮರಿಯಪ್ಪ ಕಟ್ಟಿಮನಿ, ಹನುಮಂತ ಕುರಿ, ಉಮೇಶ ಚವ್ಹಾಣ, ಖೇಮಣ್ಣ ರಾಠೋಡ, ಗೋವಿಂದ ಪವಾರ್, ಅಮರೇಶ ಮೇಟಿ, ದೇವರೇಡ್ಡಿ ಮೇಟಿ, ಗದ್ದೆಪ್ಪ ಕಟ್ಟಿಮನಿ, ಗದ್ದೆಪ್ಪ ಗೌಂಡಿ, ಶ್ರವಣಕುಮಾರ ದಾಸರ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು