2:33 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

‘ಉಸಿರಿಗಾಗಿ  ಹಸಿರು’ ತಂಡದಿಂದ ಗಿಡ ಬೆಳೆಸುವ ಜಾಗೃತಿ: ಊರು, ಕೇರಿ, ಮನೆ ಹಿತ್ತಲಿನಲ್ಲಿ ಗಿಡ ನೆಟ್ಟು ಖುಷಿ ಖುಷಿ !

15/06/2021, 19:45

ಮಂಗಳೂರು(reporterkarnataka news):‘ಉಸಿರಿಗಾಗಿ  ಹಸಿರು’ ಎನ್ನುವ ಜಾಗೃತಿ ಕಾರ್ಯಕ್ರಮ ಅತ್ಯಂತ  ಹೆಚ್ಚಿನ  ಜನ ಮನ್ನಣೆ ಯೊಂದಿಗೆ ಜರುಗಿತು. ಗಿಡವನ್ನು ಬೆಳೆಸಬೇಕು ಎನ್ನುವ ಬಗ್ಗೆ ಅರಿವು ಮೂಡಿಸಲು ಜೂನ್ 8ರಂದು ಜನರು ತಮ್ಮ ಊರು, ಕೇರಿ, ಮನೆಯಲ್ಲಿ ಗಿಡ ನೆಡುವ ಕಾರ್ಯವನ್ನು ಮಾಡಬೇಕು. ವರ್ಷವಿಡೀ ನೆಟ್ಟ ಗಿಡವನ್ನು ಪೋಷಿಸಬೇಕು. ಗಿಡವನ್ನು ಕುಟುಂಬದಂತೆ ನೋಡಬೇಕು. ಈ ಕಾರ್ಯಕ್ಕೆ ಕೈ ಜೋಡಿಸುವವರು  ಆ ದಿನ ಗಿಡ ನೆಟ್ಟವರು ಪರಿಸರಕ್ಕೆ ಮಾಡಿದ ಸೇವೆಯನ್ನು ರಶ್ಮಿ ಉಳ್ಳಾಲ್ ತಂಡಕ್ಕೆ ಕಳುಹಿಸಿಕೊಡಲು ಕರೆ ನೀಡಿದ್ದು, ಇದಕ್ಕೆ ಮಂಗಳೂರಿನಾದ್ಯಂತ ಅತೀವ ಹೆಚ್ಚಿನ ಮಟ್ಟದಲ್ಲಿ ಪ್ರಶಂಸೆಯನ್ನು ಪಡೆದಿರುತ್ತದೆ. 

ಜೂನ್ 8 ರಂದು ರಶ್ಮಿ ಉಳ್ಳಾಲ್ ಅವರ ತಂಡ ತೊಕ್ಕೊಟ್ಟಿನಲ್ಲಿ ಗಿಡ ನೆಡುತ್ತಿದ್ದರೆ, ಇತರ ಪರಿಸರ ಪ್ರಿಯರು ತಮ್ಮ ತಮ್ಮ ಮನೆಯಲ್ಲಿ ಬೆಳಗ್ಗೆ 8.30 ಕ್ಕೆ ಸರಿಯಾಗಿ ಮೂಡಬಿದ್ರಿ, ಕಾರ್ಕಳ, ಕೆಂಜಾರ್ ಬೆಂಗಳೂರು, ಅಳೆದಂಗಡಿ, ಉಳ್ಳಾಲ್ , ಉಡುಪಿ ಕಡೆಯಿಂದ ತಾವು ನೆಟ್ಟ ಗಿಡದ ಚಿತ್ರವನ್ನು ಕಳುಹಿಸಿಕೊಟ್ಟಿದ್ದಾರೆ.


ಏಕ ಕಾಲದಲ್ಲಿ ನೂರಾರು ಗಿಡ ನೆಟ್ಟಿರೋದು ಪರಿಸರ ಪ್ರಿಯರಿಗೆ ಖುಷಿ ತಂದಿದೆ.ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮರ ಕಡಿಯುವ ಕಾರ್ಯ ನಡೆಯುತ್ತಾ ಬಂದಿದ್ದು, ಗಿಡ ಬೆಳೆಸುವ ಹಾಗೂ ರಕ್ಷಿಸುವ ಕಾರ್ಯ ಮನೆಯಿಂದ ಆರಂಭ ಆಗಬೇಕು. ಹೀಗೆ ಮಾಡುವುದರಿಂದ  ಜನರಿಗೆ  ಗಿಡ ರಕ್ಷಿಸುವ ಮನೋಭಾವನೆ ಬೆಳೆಯಬಹುಧು ಎನ್ನುವ ಉದ್ದೇಶ  ಉಸಿರಿಗಾಗಿ ಹಸಿರು ತಂಡದ್ದಾಗಿದೆ.
ಇಂತಹ ಸಂದರ್ಭದಲ್ಲಿ ರಶ್ಮಿ ಉಳ್ಳಾಲ್ ಅವರು ತೊಕ್ಕೊಟ್ಟು ಪರಿಸರದಲ್ಲಿ  ತಮ್ಮ ತಂಡದ ಸಹಾಯದಿಂದ 2೦ ಗಿಡ ನೆಡುವ ಹಾಗೂ  ಮನೆಗೊಂದು ಸಸಿಯನ್ನು ವಿತರಿಸುವ ಕಾರ್ಯವನ್ನು ಮಾಡಿದ್ದು ಹೊಳೆ ದಾಸವಾಳ , ಬೇವಿನ ಗಿಡ, ಲಕ್ಷ್ಮಣ ಫಲ, ಮಹಾಗನಿ  10 ಗಿಡವನ್ನು ಮನೆ ಮನೆಗೆ ವಿತರಿಸುವ ಕಾರ್ಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಪರಿಸರ ಪ್ರೇಮಿ ಮಾಧವ್ ಉಳ್ಳಾಲ್ , ಲತೀಶ್ , ಶರತ್ , ನಿತೀಶ್ ನಾಯರ್ , ಪ್ರಥ್ವಿರಾಜ್  ಶೆಟ್ಟಿ, ಶ್ರೀಕಾಂತ್  ,ಶ್ರೀಮಂತ್ ,ಬೃಜೇಶ್  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು