5:01 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ…

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಕುಸಿತ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಲಿ: ಮಿಥುನ್ ರೈ ಆಗ್ರಹ

16/06/2021, 09:39

ಮಂಗಳೂರು(reporterkarnataka news): ಮರವೂರು ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕೆಂದು ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ  ಒತ್ತಾಯಿಸಿದರು.

ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವುದರಿಂದ ಮರವೂರು ಸೇತುವೆ ದುರಂತ ಸಂಭವಿಸಿದೆ. ಹೊಸ ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ಮುಗಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ರೈಲ್ವೇ ಮಾರ್ಗ ಹಾಗೂ ಸೇತುವೆ ನಡುವೆ ಜೆಸಿಬಿಗಳನ್ನು ಉಪಯೋಗಿಸಿ ಕೆಲಸ ನಡೆಯುತ್ತಿದ್ದ ಸಂದರ್ಭ ಸ್ಥಳೀಯರು ವಿಚಾರಿಸಿದಾಗ ಹೂಳೆತ್ತುವ ಕೆಲಸ ಎಂದು ಗಣಿಗಾರಿಕೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಹೂಳೆತ್ತುವ ಮಣ್ಣನ್ನು ಅಲ್ಲೇ ಸಮೀಪದ ಹೊಂಡಕ್ಕೆ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದೆವು. ಆದರೆ ಅಲ್ಲಿ ಹೂಳೆತ್ತಿದ್ದ ಮಣ್ಣು ಹಾಕಲಾಗಿಲ್ಲ. ಬದಲಾಗಿ ಸುಮಾರು 700 ಲೋಡ್‌ನಷ್ಟು ಮರುಳು ಶೇಖರಣೆಯಾಗಿದೆ ಎಂದು ಸ್ಥಳೀಯರಾದ ಬಾಬು ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು