5:25 PM Friday29 - March 2024
ಬ್ರೇಕಿಂಗ್ ನ್ಯೂಸ್
ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ ಕಾಜೂರು ದರ್ಗಾಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ: ಚುನಾವಣಾ ಉಸ್ತುವಾರಿ ರಮಾನಾಥ… ವಿಶಾಖಪಟ್ಟಣದಿಂದ ತಂದ 6 ಕೆಜಿಗೂ ಅಧಿಕ ಗಾಂಜಾ ವಶ: ಆರೋಪಿ ಬಂಧನ; 9… ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್: ಸಚಿವ ತಂಗಡಗಿ ಹೇಳಿಕೆಗೆ ಶಾಸಕ ಹರೀಶ್ ಪೂಂಜ… ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; ಹೊಸಳಿಗಮ್ಮ… ಮಂಗಳೂರು: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿ ಆಗಮಿಸಿದ ಡಾ. ಮಂಜುನಾಥ… ಜೆಡಿಎಸ್ ಸ್ಪರ್ಧಿಸಲಿರುವ 3 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಮಂಡ್ಯದಿಂದ ಕುಮಾರಸ್ವಾಮಿ, ಹಾಸನದಿಂದ ಪ್ರಜ್ವಲ್… ಮನೆಯಲ್ಲಿ ಅಕ್ರಮ ನಾಡ ಬಂದೂಕು: ಬಣಕಲ್ ಸಮೀಪದ ವ್ಯಕ್ತಿಯ ಬಂಧನ ಅಭಿವೃದ್ಧಿ ಮತ್ತು ಕಾಂಗ್ರೆಸ್- ಎರಡೂ ವಿರೋಧ ಪದಗಳು: ಬಿಜೆಪಿ ರಾಜ್ಯ ಪ್ರಕೋಷ್ಠ ಸಂಚಾಲಕ… ಲೋಕಸಭೆ ಚುನಾವಣೆ: ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟನೆ: ಹಿರಿಯ ಮುತ್ಸದ್ಧಿ ಜನಾರ್ದನ ಪೂಜಾರಿ…

ಇತ್ತೀಚಿನ ಸುದ್ದಿ

ಪರಿಸರ ಸಮತೋಲನ ಕಾಪಾಡದಿದ್ದರೆ ಗಂಡಾಂತರ ಖಚಿತ: ಶಾಸಕ ಸುರೇಶ್ ಗೌಡ ಎಚ್ಚರಿಕೆ

17/06/2021, 07:40

ಡಿ.ಆರ್. ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ದಿನಗಳಲ್ಲಿ ಗಂಡಾಂತರ ಎದುರಾಗಲಿದೆ. ನಾವುಗಳು ಪರಿಸರವನ್ನು ಸಂರಕ್ಷಿಸಿ ಬೆಳೆಸುವುದರಿಂದ ಮುಂದೆ ಆಗುವ ಅನಾಹುತ ತಪ್ಪಿಸಬಹುದೆಂದು ಶಾಸಕ ಸುರೇಶ್ ಗೌಡ ಹೇಳಿದರು.

ನಾಗಮಂಗಲ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಮಾಜಿಕ ಅರಣ್ಯ ಇಲಾಖೆ,

ನಾಗಮಂಗಲ ಸುಧಾಮೂರ್ತಿ ಮತ್ತು ಜನನಿ ಸಂಸ್ಥೆ ಹಾಗೂ ವಿಶ್ವ ಜಾನಿ ಸೇವಾ ಸಂಸ್ಥೆ  ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಸಿ ನೆಟ್ಟು ಅವರು ಮಾತನಾಡಿದರು.

ಪ್ರಸ್ತುತ ಸನ್ನಿವೇಶವನ್ನು ಗಮನಿಸಿ ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮುಖಾಂತರ ಪರಿಸರ ಬಗ್ಗೆ ಕಾಳಜಿ ವಹಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

ಪ್ರತಿಯೊಬ್ಬರಿಗೂ ಪರಿಸರ ಬಗ್ಗೆ ಕಾಳಜಿ ಇಲ್ಲದಿದ್ದರೆ ಮುಂದೊಂದು ದಿನ ಗಂಡಾಂತರ ಆಗುವುದರಲ್ಲಿ ಅನುಮಾನವಿಲ್ಲ. ಪ್ರತಿಯೊಬ್ಬರು ತಮ್ಮ ಆತ್ಮಸಾಕ್ಷಿಯ ಪರವಾಗಿ ಪರಿಸರ ಸಂರಕ್ಷಿಸುವ ಮುಖಾಂತರ ಮುಂದಿನ ತಲೆಮಾರಿಗೆ ಪರಿಸರವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ನುಡಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಸತೀಶ್, ಎಪಿಎಂಸಿ ಅಧ್ಯಕ್ಷ ರಮೇಶ್, ಜಿಲ್ಲಾ ಪರಿಸರ ಸಂರಕ್ಷಣಾಧಿಕಾರಿ ವೆಂಕಟೇಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಪಿಎಂಸಿ ಸಿಬ್ಬಂದಿ ವರ್ಗದವರು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು