11:54 AM Tuesday23 - April 2024
ಬ್ರೇಕಿಂಗ್ ನ್ಯೂಸ್
ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ…

ಇತ್ತೀಚಿನ ಸುದ್ದಿ

 ಜುಲೈ ಕೊನೆಯ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ?: ಶಿಕ್ಷಣ ಇಲಾಖೆಯಿಂದ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ 

19/06/2021, 07:18

ಬೆಂಗಳೂರು(reporterkarnataka news):  ಜುಲೈ ಕೊನೆಯ ವಾರದಲ್ಲಿ ಎಸ್ಸೆಸ್ಸೆಲ್ಸಿ
ಪರೀಕ್ಷೆ ನಡೆಯೋದು ಬಹುತೇಕ ಖಚಿತ ಎಂದು ಹೇಳಿರುವ ಶಿಕ್ಷಣ ಇಲಾಖೆ ಹೇಳಿದೆ. ಈ ಮಧ್ಯೆ

ಪರೀಕ್ಷೆಯ ಎಲ್ಲ ಮಾದರಿ ಪ್ರಶ್ನೆ ಪತ್ರಿಕೆಯನ್ನು ತನ್ನ ವೆಬ್ ಸೈಟ್ ನಲ್ಲಿ ಬಿಡುಗಡೆಗೊಂಡಿದೆ. ಇದರೊಂದಿಗೆ ಎಸ್​ಎಸ್​ಎಲ್​​ಸಿ ಪರೀಕ್ಷೆ ಬಗ್ಗೆ ಉಂಟಾಗಿರುವ ಗೊಂದಲಕ್ಕೆ ತೆರೆ ಬಿದ್ದಿದೆ.

ಎರಡು ದಿನದ ಹಿಂದೆ ಕೋರ್​ ಸಬ್ಜೆಕ್ಟ್​ ನ ಮಾದರಿ ಪ್ರಶ್ನೆ ಪತ್ರಿಕೆ ರಿಲಿಸ್​ ಆಗಿತ್ತು. ಇದೀಗ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯೂ ಸಹ ಬಿಡುಗಡೆಯಾಗಿದೆ. ಅದರಂತೆ ಇದೀಗ ಎಲ್ಲಾ ಭಾಷಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್​ ಆಗಿದೆ. ಮಾದರಿ ಪ್ರಶ್ನೆಪತ್ರಿಕೆ ಶಿಕ್ಷಣ ಇಲಾಖೆಯ 

www.sslc.Karnataka.gov.in ವೆಬ್ ಅಲ್ಲಿ ಸಿಗಲಿದೆ.

ಪ್ರಥಮ ಭಾಷೆ ಕನ್ನಡ,  ಪ್ರಥಮ ಭಾಷೆ  ಉರ್ದು, ಪ್ರಥಮ ಭಾಷೆ  ಇಂಗ್ಲಿಷ್, ಪ್ರಥಮ ಭಾಷೆ ಸಂಸ್ಕೃತ ಪತ್ರಿಕೆ ಬಿಡುಗಡೆಯಾಗಿದೆ. ದ್ವಿತೀಯ ಭಾಷೆ ಇಂಗ್ಲಿಷ್, ದ್ವಿತೀಯ ಭಾಷೆ ಕನ್ನಡ ಹಾಗೂ ತೃತೀಯ ಭಾಷೆ ಹಿಂದಿ, ತೃತೀಯ ಭಾಷೆ ಇಂಗ್ಲಿಷ್ ನ ಮಾದರಿ ಪ್ರಶ್ನೆ ಪತ್ರಿಕೆ ರಿಲೀಸ್​ ಮಾಡಲಾಗಿದೆ. ತಲಾ 40 ಅಂಕಗಳ ಒಟ್ಟು 120 ಅಂಕದ ಪ್ರಶ್ನೆಪತ್ರಿಕೆಗಳಿಗೆ 3 ಗಂಟೆಗಳ ಕಾಲ ಪರೀಕ್ಷೆ ನಡೆಯಲಿದೆ. 

ಪರೀಕ್ಷೆಯಲ್ಲಿ ಎಲ್ಲ ಪ್ರಶ್ನೆಗಳು ಬಹು ಆಯ್ಕೆ ಆಗಿದ್ದು, ಉತ್ತರಗಳನ್ನು  ಒಎಂ ಆರ್ ಶೀಟ್ ನಲ್ಲಿ ನಮೂದಿಸಬೇಕು. ಒಎಂ ಆರ್ ಶೀಟ್ ಮಾದರಿಯೂ ಪ್ರಕಟಗೊಂಡಿದ್ದು, ಈ ತಿಂಗಳ ಕೊನೆಯ ವಾರದಲ್ಲಿ ಘೋಷಣೆ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು