5:45 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಬಿಜೆಪಿ ವತಿಯಿಂದ 7ನೇ ವರ್ಷದ ವಿಶ್ವ ಯೋಗ ದಿನಾಚರಣೆ

21/06/2021, 23:28

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka.com

ಮಸ್ಕಿಯಲ್ಲಿ ಭಾರತೀಯ ಜನತಾ ಪಾರ್ಟಿ ಮಸ್ಕಿ ಮಂಡಲ ವತಿಯಿಂದ 7ನೇ ವರ್ಷದ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಇದೇ ಸಂದರ್ಭದಲ್ಲಿ ಯೋಗಗುರು ಆನಂದ್ ಪತ್ತರ ಜಿ.ಮತ್ತು ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ ಮಾತನಾಡಿ, ಯೋಗ ಮಾಡುವುದರಿಂದ ಮನಸಿಗೆ ನೆಮ್ಮದಿ, ತೃಪ್ತಿ ಸಿಗುತ್ತದೆ. ಹಾಗೇ ಜೀವನದಲ್ಲಿ ಬದಲಾವಣೆಗಳಾಗುತ್ತವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜನಪ್ರಿಯ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಮಾತನಾಡಿದರು. ಪುರಾತನ ಕಾಲದಿಂದಲೂ ಭಾರತೀಯ ಪರಂಪರೆಯಲ್ಲಿ ಬೆರೆತು, ಬೆಳೆದ ಯೋಗ, ಜೀವನದ ಭಾಗವಾಗಿದ್ದ ಆರೋಗ್ಯ ಕಲೆ. ಇದು ಜಗತ್ತಿಗೆ ಭಾರತದ ಕೊಡುಗೆ. ದೇಹ ಮತ್ತು ಪ್ರಜ್ಞೆಯನ್ನೊಂದುಗೂಡಿಸಿ ಸದೃಢ ಆರೋಗ್ಯ ನೀಡುವ ಯೋಗವನ್ನು    ಭಾರತದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು ಇಡೀ ವಿಶ್ವಕ್ಕೆ ಪರಿಚಯ ಮಾಡಿಸಿಕೊಟ್ಟರು  ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು, ಸಾರ್ಥಕ ಜೀವನವನ್ನು ನಡೆಸೋಣ ಎಂದು ಹೇಳಿದರು.

ಎಸ್ಸಿ ಮೊರ್ಚಾ ವತಿಯಿಂದ ಡಾ. ಸಿದ್ದಲಿಂಗಯ್ಯ ಯವರಿಗೆ  ಶದ್ಧಾಂಜಲಿಯನ್ನು ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಆಚರಿಸಲಾಯಿತ್ತು, 

ಕಾರ್ಯಕ್ರಮದಲ್ಲಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಶರಣಬಸವ ವಕೀಲರು ಉಮಲೂಟಿ,  ಮಸ್ಕಿ ಮಂಡಲ ಅದ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಪ್ರಧಾನ ಕಾರ್ಯದರ್ಶಿ ಶರಣ ಬಸವ ಸೊಪ್ಪಿಮಠ, ಎಸ್ಸಿ ಮೋರ್ಚಾ ಅಧ್ಯಕ್ಷ ಮೌನೇಶ ಮುರಾರಿ, ಎಸ್ಸಿ ಮೋರ್ಚಾ ಪ್ರ.ಕಾರ್ಯದರ್ಶಿಯಾದ ಬಾಲಸ್ವಾಮಿ ಜಿನ್ನಾಪೂರು, ಮಲ್ಲಪ್ಪ ಗೋನಾಳ,

ರಾಮಕೃಷ್ಣ ಆಶ್ರಮದ ಸಿದ್ದು ಜಿ. ಮತ್ತು ಸುಖ ಮುನಿಯಪ್ಪ ನಾಯಕ ಪ್ರಕಾಶ ಧಾರಿವಾಲ್, ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು