1:34 AM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ ಜನರು!!

23/06/2021, 16:35

ಚಿತ್ರ :ಅನುಷ್ ಪಂಡಿತ್ ಮಂಗಳೂರು

strong>ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆ ವರೆಗೆ ಅನ್ ಲಾಕ್ ಜಾರಿಯಲ್ಲಿರುವುದರಿಂದ ಮಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ನಗರಕ್ಕೆ ಆಗಮಿಸಿದವರಲ್ಲಿ ಹೆಚ್ಚಿನವರು ಜತೆಗೆ ಮಕ್ಕಳನ್ನು ಕೂಡ ಕರೆದು ತಂದಿರುವುದು ಹಲವೆಡೆ ಕಂಡು ಬಂತು. ಈ ನಡುವೆ ಮಂಗಳೂರು ನಗರದಲ್ಲಿ ಪೊಲೀಸ್ ತಪಾಸಣೆ ತೀವ್ರಗೊಂಡಿದೆ. 


ಕೊರೊನಾ 3ನೇ ಅಲೆಯ ಭೀತಿಯಿದ್ದರೂ, ಮಕ್ಕಳನ್ನು ಸುರಕ್ಷಿತವಾಗಿ ಮನೆಯಲ್ಲಿ ಇರಿಸಿಕೊಳ್ಳುವ ಬಗ್ಗೆ ಜಿಲ್ಲಾಡಳಿತ ಪದೇ ಪದೇ ವಿನಂತಿ ಮಾಡಿದರೂ ನಗರಕ್ಕೆ ಆಗಮಿಸಿದ ಹೆಚ್ಚಿನ ಪೋಷಕರ ಜತೆ 18 ವರ್ಷ ಕೆಳಗಿನ ಮಕ್ಕಳಿದ್ದರು.

ಮಧ್ಯಾಹ್ನ 2 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಹಾಗೂ ಸಾರ್ವಜನಿಕರಿಗೆ ಖರೀದಿಗೆ ಅವಕಾಶ ನೀಡಲಾಗಿತ್ತು.

ಆದರೆ ಮಧ್ಯಾಹ್ನ 2.45ರ ವರೆಗೆ ಕೂಡ ಕೆಲವು ಕಡೆಗಳಲ್ಲಿ ಜನರು ರಸ್ತೆಯಿಂದ, ಅಂಗಡಿ ಬಾಗಿಲಿನಿಂದ ತೆರವುಗೊಂಡಿರಲಿಲ್ಲ.

ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ಪೊಲೀಸರು ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು