3:27 PM Tuesday23 - April 2024
ಬ್ರೇಕಿಂಗ್ ನ್ಯೂಸ್
ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್… ನಮ್ಮ ಕೆಲಸವೇ ಅಪಪ್ರಚಾರ ನಡೆಸುವವರಿಗೆ ತಕ್ಕ ಉತ್ತರ: ಸರಪಾಡಿ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ… ಗಾಳಿ ಮಳೆಗೆ ಮರ ಬಿದ್ದು ತಂಡಾದ ಪವರ್ ಲೈನ್: ವಿದ್ಯುತ್ ಶಾಕ್ ಹೊಡೆದು… ಕೊಲ್ಯದಿಂದ ಅಬ್ಬಕ್ಕ ರಾಣಿ ಸರ್ಕಲ್‌ ವರೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ… 91ರ ಹರೆಯದ ಮಾಜಿ ಪ್ರಧಾನಿ ದೇವೇಗೌಡರು ಮೋದಿ ಗೆಲ್ಲಿಸಿ ಎನ್ನುತ್ತಿದ್ದಾರೆ; ದಿನಬಳಕೆ ವಸ್ತುಗಳ… ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ: ಪಕ್ಷದ ಧ್ವಜ ನೀಡಿ…

ಇತ್ತೀಚಿನ ಸುದ್ದಿ

ಪರಿಸರ ಮತ್ತು ನೀರಿನ ಶುಚಿತ್ವ ಕಾಪಾಡುವ ಮೂಲಕ ಮಲೇರಿಯಾ ಪಿಡುಗು ನಿವಾರಣೆ ಸಾಧ್ಯ

25/06/2021, 08:03

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾವಿರುವ ಸುತ್ತಮುತ್ತಲಿನ ಪರಿಸರ ಹಾಗೂ ನೀರಿನ ಶುಚಿತ್ವ ಕಾಪಾಡಿಕೊಳ್ಳುವ ಮುಖಾಂತರ ಮಲೇರಿಯಾ ರೋಗದ ಪಿಡುಗನ್ನು ತೊಲಗಿಸಲು ಮುಂಜಾಗೃತ ಕ್ರಮ ವಹಿಸುವಂತೆ ಮಲೇರಿಯಾ ಜಿಲ್ಲಾ ನಿರ್ಮೂಲನಾ ಅಧಿಕಾರಿಗಳಾದ ಭವಾನಿಶಂಕರ್ ಕರೆ ನೀಡಿದರು.

ಅವರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಾಗಮಂಗಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಡ್ಯ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಮಲೇರಿಯಾ ವಿರೋಧಿ ಮಾಸಾಚರಣೆ  ಹಾಗೂ ಶ್ರೀ ಕ್ಷೇತ್ರದಿಂದ ಸಂಘಗಳ ಲಾಭಾಂಶ ವಿತರಣೆ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾಡಿದರು.

ನಮ್ಮ ಮನೆಗಳ ಹಾಗೂ ನಾವಿರುವ ವಾಸಸ್ಥಳದಲ್ಲಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತೆ ಕೈಗೊಂಡು ಮುಂಗಾರಿನ ಸಂದರ್ಭದಲ್ಲಿ ಆಗುವ ತೊಂದರೆಗಳನ್ನು ಜನರಲ್ಲಿ ಜಾಗೃತಿ ಮೂಡಿಸಿದರು.  ಮತ್ತೊಮ್ಮೆ ತಾವುಗಳು ಶುಚಿತ್ವವನ್ನು ಕಾಪಾಡಿಕೊಂಡು ಸೊಳ್ಳೆಗಳ ನಿರ್ಮೂಲನೆ ಮಾಡಿ ಮುಂಬರುವ ರೋಗಗಳನ್ನು ತಡೆಯಲು ಸಾಧ್ಯವೆಂದು ತಿಳಿಸಿದರು.

ಶ್ರೀ ಕ್ಷೇತ್ರ ತಾಲ್ಲೂಕು ಕ್ಷೇತ್ರ ಅಧಿಕಾರಿ ಹೇಮಲತಾ ಹೆಗ್ಗಡೆಯವರು ಮಾತನಾಡಿದರು .
ತಾಲ್ಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ಕಾರ್ಯಕ್ರಮದ ಉದ್ಘಾಟಿಸಿ ಆರೋಗ್ಯ ಸಿಬ್ಬಂದಿಗಳಿಗೆ ಬ್ಯಾಗ್ ವಿತರಣೆ ಮಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಗಳಾದ ರಮೇಶ್ ಸಸಿ ವಿತರಣೆ ಮಾಡಿದರು. ಪುರಸಭಾ ಅಧ್ಯಕ್ಷರಾದ ಆಶಾ, ವೇಣುಗೋಪಾಲ್ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು