6:17 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ವಿದೇಶಗಳಿಗೆ ತೆರಳುವ‌ವರಿಗೆ ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ಲಸಿಕೆ: ಶಾಸಕ ವೇದವ್ಯಾಸ ಕಾಮತ್  ಪರಿಶೀಲನೆ  

25/06/2021, 19:20

ಮಂಗಳೂರು(reporterkarnataka news): ಉದ್ಯೋಗ, ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ‌ವರಿಗೆ ಲಸಿಕೆ ವಿತರಣೆಯು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲಿನಲ್ಲಿ ನಡೆಯುತ್ತಿದ್ದು,

ಶಾಸಕ ಡಿ. ವೇದವ್ಯಾಸ್ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಉದ್ಯೋಗಕ್ಕಾಗಿ, ವಿದ್ಯಾಭ್ಯಾಸಕ್ಕಾಗಿ ವಿದೇಶ ಪ್ರಯಾಣ ಕೈಗೊಳ್ಳುವವರಿಗೆ ವಾರಾಂತ್ಯದ ದಿನಗಳಲ್ಲಿ ಲಸಿಕೆ ವಿತರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಇಂದು ಡೊಂಗರಕೇರಿ ಕೆನರಾ ಗರ್ಲ್ಸ್ ಹೈಸ್ಕೂಲ್ ನಲ್ಲಿ ನಡೆಯುವ ಲಸಿಕಾ ಶಿಬಿರಕ್ಕೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಾಯಿತು ಎಂದರು.

ಜಿಲ್ಲೆಯ ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡಲು ನಮ್ಮ ಸರಕಾರ, ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಈಗಾಗಲೇ ಜಿಲ್ಲಾಡಳಿತ, ರೆಡ್ ಕ್ರಾಸ್ ಹಾಗೂ ರೋಟರಿ ಸಂಸ್ಥೆಗಳ ಸಹಕಾರದೊಂದಿಗೆ ಅಶಕ್ತರಿಗಾಗಿ ಸಂಚಾರಿ ವಾಹನವನ್ನು ಕೂಡ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ನಿಯಂತ್ರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಮರ್ಥವಾಗಿ ಕಾರ್ಯ ನಿರ್ವಹಿಸುತಿದ್ದು ಜಿಲ್ಲೆಯ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ  ಚೇರ್ ಮೆನ್ ಶಾಂತರಾಮ್ ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರಭಾಕರ್ ಶರ್ಮ, ರೋಟರಿ‌ ಸಂಸ್ಥೆಯ ಪ್ರಮುಖರಾದ ಯತೀಶ್ ಬೈಕಾಂಪಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು