ಇತ್ತೀಚಿನ ಸುದ್ದಿ
ಹಾನಗಲ್ ವಿಧಾನ ಸಭೆ ಕ್ಷೇತ್ರ ಉಪ ಚುನಾವಣೆ: ಸಿಎಂ ಪುತ್ರ ವಿಜಯೇಂದ್ರಗೆ ಬಿಜೆಪಿ ಟಿಕೆಟ್
26/06/2021, 11:23
ಬೆಂಗಳೂರು(reporterkarnataka news): ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭೆ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಮಾಜಿ ಸಚಿವ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಸ್ಪರ್ಧಿಸಲು ಸಿಎಂ ಪುತ್ರನಿಗೆ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಹಾನಗಲ್ ಕ್ಷೇತ್ರದಲ್ಲಿ ಲಿಂಗಾಯಿತ ಸಮುದಾಯ ಪ್ರಾಬಲ್ಯ ಹೊಂದಿದೆ. ಸಿಎಂ ಪುತ್ರನಿಗೆ ಪಕ್ಷವು ಟಿಕೆಟ್ ನೀಡಿರುವುದರಿಂದ ಯಡಿಯೂರಪ್ಪ ವಿರೋಧಿ ಬಣಕ್ಕೆ ಹಿನ್ನಡೆಯಾಗಿದೆ.