7:02 PM Thursday18 - April 2024
ಬ್ರೇಕಿಂಗ್ ನ್ಯೂಸ್
ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ…

ಇತ್ತೀಚಿನ ಸುದ್ದಿ

ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ.38.03 ಲಕ್ಷ ರೂ. ಮೌಲ್ಯದ ಆಹಾರ ಕಿಟ್, ವೈದ್ಯಕೀಯ ಪರಿಕರ, ಪಿಪಿಇ ಕಿಟ್, ಸ್ಯಾನಿಟೈಸರ್ ವಿತರಣೆ

26/06/2021, 08:11

ಮಂಗಳೂರು(reporterkarnataka news): ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ ತಿಂಗಳ ಆರಂಭದಿಂದ ಇದುವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಆಹಾರ ಕಿಟ್ ಹಾಗೂ ಉಭಯ ಜಿಲ್ಲೆಗಳಿಗೆ ವೈದ್ಯಕೀಯ ಪರಿಕರ, ಬಡವರಿಗೆ ವೈದ್ಯಕೀಯ ಚಿಕಿತ್ಸೆ ಹಾಗೂ ಮಾಸ್ಕ್, ಸ್ಯಾನಿಟೈಸರ್ , ಪಿಪಿಇ ಕಿಟ್, ಗ್ಲೌಸ್ ವಿತರಿಸಲು ಒಟ್ಟು 38.03 ಲಕ್ಷ ರೂ. ವ್ಯಯಿಸಲಾಗಿದೆ

ಕೊರೊನಾ ಲಾಕ್ ಡೌನ್ ಸಮಯದಲ್ಲಿ ಉಭಯ ಜಿಲ್ಲೆಗಳ ಬಡ ಕುಟುಂಬಗಳಿಗೆ 1538 ಆಹಾರ ಕಿಟ್ ಗಳನ್ನು ವಿತರಿಸಲಾಗಿದೆ. ದ.ಕ. ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ 6.16 ಲಕ್ಷ ರೂ. ಮೌಲ್ಯದ 10 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್ ಗಳನ್ನು ನೀಡಲಾಗಿದೆ. ಬಂಟ್ವಾಳ ತಾಲೂಕಿನ ಸೇವಾ ಭಾರತಿಗೆ 45 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಗ್ಲೌಸ್, ಸ್ಯಾನಿಟೈಸರ್  ಮತ್ತು ಮಾಸ್ಕ್ ನೀಡಲಾಗಿದೆ.

ಲಾಕ್ ಡೌನ್ ಅವಧಿಯಲ್ಲಿ ಕರ್ತವ್ಯದಲ್ಲಿದ್ದ ಸುಮಾರು 100 ಮಂದಿ ಪೊಲೀಸರಿಗೆ ಟೀ ಮತ್ತು ಫಲಾಹಾರ ಒದಗಿಸಲಾಗಿದೆ. 45 ಮಂದಿ  ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಗಿದೆ. ಮಂಗಳೂರು ಟ್ರಾಫಿಕ್ ಪೊಲೀಸರಿಗೆ ಸ್ಯಾನಿಟೈಸರ್, ಫೇಸ್ ಮಾಸ್ಕ್, ಫೇಸ್ ಸೀಲ್ಡ್ ನೀಡಲಾಗಿದೆ. 18 ಮಂದಿಗೆ ವೈದ್ಯಕೀಯ ಚಿಕಿತ್ಸೆಗಾಗಿ 13,47,441 ರೂ. ವ್ಯಯಿಸಲಾಗಿದೆ.

ಈ ಎಲ್ಲ ಸೇವಾ ಕಾರ್ಯಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ಒಟ್ಟು 38,03,412 ರೂ. ಖರ್ಚುಮಾಡಲಾಗಿದೆ.

ಈ ಎಲ್ಲ ಸೌಲಭ್ಯ ವಿತರಣೆ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ಕಾರ್ , ಛಾಯಾಗ್ರಾಹಕ ಮಂಜು ನೀರೇಶ್ವಾಲ್ಯ , ರಮೇಶ್ ಶೆಣೈ ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು