8:50 AM Saturday20 - April 2024
ಬ್ರೇಕಿಂಗ್ ನ್ಯೂಸ್
ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ

ಇತ್ತೀಚಿನ ಸುದ್ದಿ

ಅಥಣಿ: ಬಟ್ಟೆ ಬಗೆಯಲು ತೆರಳಿದ್ದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರುಪಾಲು; ಅಗ್ನಿಶಾಮಕ ದಳದಿಂದ ಶೋಧ

28/06/2021, 17:42

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಕೃಷ್ಣಾ ನದಿಗೆ ಬಟ್ಟೆ ಒಗೆಯಲು ತೆರಳಿದ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಸಹೋದರರು ಕಾಲು ಜಾರಿ ನೀರು ಪಾಲಾದ ದಾರುಣ ಘಟನೆ ಸೋಮವಾರ ನಡೆದಿದೆ.

ಮೃತಪಟ್ಟವರನ್ನು ಪರಶುರಾಮ್ ಗೋಪಾಲ್ ಬನಸೊಡೆ, ಸದಾಶಿವ ಗೋಪಾಲ್ ಬನಸೊಡೆ, ಶಂಕರ್ ಗೋಪಾಲ ಬನಸೊಡೆ ಹಾಗೂ ಧರೆಪ್ಪ ಗೋಪಾಲ ಬನಸೊಡೆ ಎಂದು ಗುರುತಿಸಲಾಗಿದೆ. ಈ ನಾಲ್ವರು ಸಹೋದರರು ಸೋಮವಾರ ಮಧ್ಯಾಹ್ನ ಮನೆ ಸಮೀಪದ ಕೃಷ್ಣಾ ನದಿಗೆ ಬಟ್ಟೆ ಒಗೆಯಲೆಂದು ತೆರಳಿದ್ದರು. ನದಿ ದಂಡೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಬ್ಬಾತ ಬಿದ್ದಾಗ ಆತನ ರಕ್ಷಣೆಗೆಂದು ಇತರ ಮೂವರು ಸಹೋದರರು ನೀರಿಗೆ ಹಾರಿದ್ದರು. ಈ ನಾಲ್ವರಲ್ಲಿ 


ಒಬ್ಬಾತನಿಗೆ ಮಾತ್ರ ಈಜಲು ಬರುತ್ತಿತ್ತು. ಈಜು ಬಾರದ ಇತರ ಮೂವರು ಸಹೋದರರು ಪ್ರಾಣಭೀತಿಯಿಂದ ಆತನನ್ನು ತಬ್ಬಿಕೊಂಡಿರುವುದರಿಂದ ನಾಲ್ವರು ಸಹೋದರರು ಒಟ್ಟಿಗೆ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಅಥಣಿ ತಾಲೂಕ ದಂಡಡಿಖಾರಿ ದುಂಡಪ್ಪ ಕೋಮಾರ ಹಾಗೂ ಅಥಣಿ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳ ಶೋಧ ಶೋಧ ಕಾರ್ಯ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು