12:13 PM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಡೆಲ್ಟಾ ಪ್ಲಸ್ ಹಾವಳಿ: ತಲಪಾಡಿ ಚೆಕ್ ಪೋಸ್ಟ್ ನಲ್ಲಿ ನೆಗೆಟಿವ್ ಸರ್ಟಿಫಿಕೇಟ್ ಇದ್ದವರಿಗೆ ಮಾತ್ರ ಪ್ರವೇಶ; ಜಿಲ್ಲಾಧಿಕಾರಿ ಪರಿಶೀಲನೆ

28/06/2021, 20:55

ಮಂಗಳೂರು(reporterkarnataka news): ಕರ್ನಾಟಕ -ಕೇರಳ ಗಡಿ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ನೆಗೆಟಿವ್ ವರದಿ ಹೊಂದಿದವರು ಪ್ರವೇಶಿಸುತ್ತಿರುವ ಬಗ್ಗೆ ನಡೆಯುತ್ತಿರುವ ತಪಾಸಣೆಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಸರ್ಕಲ್ ಇನ್ಸ್ಪೆಕ್ಟರ್ ಸಂದೀಪ್ , ಸಬ್ ಇನ್ಸ್ಪೆಕ್ಟರ್ ಶಿವಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿಗಳು, ಪಿಡಿಓ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ರಾಜ್ಯ ಸರ್ಕಾರ ಪಕ್ಕದ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬರುತ್ತಿರುವ ಹಾಗೂ ಡೆಲ್ಟಾ ಪ್ಲಸ್  ವೈರಸ್ ಕಂಡು ಬರುತ್ತಿರುವ ಹಿನ್ನೆಲೆ ಗಡಿ ಭಾಗದಿಂದ ಜಿಲ್ಲೆಗೆ ಪ್ರವೇಶಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು ಎಂದು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದರು.

ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ 24*7 ಪಾಳಿಯಲ್ಲಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಗಡಿ ಮೂಲಕ ಪ್ರವೇಶಿಸುವವರ ಕೋವಿಡ್ ನೆಗೆಟಿವ್ ವರದಿಯನ್ನು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆಯಲ್ಲಿ ಪರೀಕ್ಷಿಸಲಿದ್ದಾರೆ, ಜಿಲ್ಲೆಗೆ  ಪ್ರವೇಶಿಸುವ ಪ್ರತಿಯೊಬ್ಬ ಕೋವಿಡ್ ನೆಗೆಟಿವ್ ವರದಿಯನ್ನು  ಹೊಂದಿ ಪ್ರವೇಶಿಸುವುದು ಕಡ್ಡಾಯ ಎಂದು ಹೇಳಿದರು.

ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್ ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್ ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ.  ತುರ್ತು ಚಿಕಿತ್ಸೆಗೆ ಬರುತ್ತಿರುವವರನ್ನು ಸಹ ಇಲ್ಲಿ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ ಎಂದರು.

ಚೆಕ್ ಪೋಸ್ಟ್ ನಲ್ಲಿ ವಾಹನಗಳು ವೇಗವಾಗಿ ಬರುವ ಸಾಧ್ಯತೆ ಇರುವುದರಿಂದ ಬ್ಯಾರಿಕೇಡ್ ಅಳವಡಿಸಿ ವಾಹನಗಳ ತಪಾಸಣೆಯನ್ನು ಮಾಡಬೇಕು. ತಪಾಸಣೆ ಮಾಡುತ್ತಿರುವ ಬಗ್ಗೆ ಫಲಕವನ್ನು ಸ್ವಲ್ಪ ದೂರದಲ್ಲಿ ಅಳವಡಿಸಿರುವುದರಿಂದ ವಾಹನ ಚಾಲಕರಿಗೆ ನಿಧಾನವಾಗಿ ವಾಹನ ಚಲಾಯಿಸಲು ಅನುಕೂಲವಾಗಲಿದೆ. ಆದ್ದರಿಂದ ಇದನ್ನು ಅಧಿಕಾರಿಗಳು ಅಳವಡಿಸಲು ಮುಂದಾಗಬೇಕು ಎಂದರು.  


ಚೆಕ್ ಪೋಸ್ ನಲ್ಲಿ ಹೆಚ್ಚಿನ ಪೊಲೀಸ್, ಆರೋಗ್ಯ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆದೇಶಿಸಿದ ಅವರು, ಜಿಲ್ಲೆಯಲ್ಲಿ ಗಡಿ ಭಾಗದ ರಸ್ತೆಗಳಾದ ನೆಟ್ಟಣಿಕೆ ಮುಡ್ನೂರು, ಜಾಲ್ಸೂರು, ಸಾರಡ್ಕ ಸೇರಿದಂತೆ ಮತ್ತಿತರ ಗಡಿಗಳಲ್ಲಿ ಹಾಗೂ ಕೇರಳದ ಗಡಿಯ ಗ್ರಾಮೀಣ ರಸ್ತೆಗಳಲ್ಲಿ ಹೆಚ್ಚು ಜನರು ಸಂಚರಿಸುವ ರಸ್ತೆಗಳಿಗೂ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗುವುದು ಎಂದರು. 

ಇತ್ತೀಚಿನ ಸುದ್ದಿ

ಜಾಹೀರಾತು