3:52 PM Friday26 - April 2024
ಬ್ರೇಕಿಂಗ್ ನ್ಯೂಸ್
ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ…

ಇತ್ತೀಚಿನ ಸುದ್ದಿ

ದುರಂತ ನಡೆದು 4 ದಿನಗಳ ಬಳಿಕ ಶಾಸಕರ ಭೇಟಿ !: ನಾಲ್ವರು ಸಹೋದರರ ಚಿತೆಯ ಬೆಂಕಿ ಆರಿದ ಬಳಿಕ ಆಗಮಿಸಿದ ಕುಮಟಳ್ಳಿ!!

01/07/2021, 15:24

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಒಂದೇ ಕುಟುಂಬದ ನಾಲ್ವರು ಸಹೋದರರ ಅಂತ್ಯಸಂಸ್ಕಾರ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಇಲ್ಲಿನ ಸ್ಥಳೀಯ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತರ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.


ದುರ್ಘಟನೆ ನಡೆದು ಸುಮಾರು 4 ದಿನಗಳ ಬಳಿಕ ಶಾಸಕರು ಭೇಟಿ ನೀಡಿರುವ ಕುರಿತು ಗ್ರಾಮಸ್ಥರು ‘ರಿಪೋರ್ಟರ್ ಕರ್ನಾಟಕ’ ಜತೆ ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭದಲ್ಲಿ ಟೈಮ್ ಮಾಡಿಕೊಂಡು ಬಂದು ಮತ ಕೇಳುವ ಶಾಸಕರಿಗೆ ಗೆದ್ದ ಬಳಿಕ ಅವರ ಕ್ಷೇತ್ರದಲ್ಲಿ ಬಲು ದೊಡ್ಡ ದುರ್ಘಟನೆಯೇ ನಡೆದರೂ ಇಲ್ಲಿಗೆ ಭೇಟಿ ನೀಡಲು  ಸಮಯಾವಕಾಶವಿಲ್ಲ. ಮೃತರ ಅಂತ್ಯಕ್ರಿಯೆ ನಡೆದು ಚಿತೆಯ ಬೆಂಕಿ ನಂದಿದ ಬಳಿಕ ಅವರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ಹಲ್ಯಾಳ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಗುರುವಾರ ಬೆಳಗ್ಗೆ ಸ್ಥಳಕ್ಕೆ ಆಗಮಿಸಿದ ಶಾಸಕ ಮಹೇಶ್ ಕುಮಟಳ್ಳಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿ ಶೀಘ್ರವೇ ಪರಿಹಾರ ಘೋಷಿಸುವ ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಮಹೇಶ್ ಕುಮಟಳ್ಳಿ, ಮುಖ್ಯಮಂತ್ರಿಗಳ ವಿಪತ್ತು ನಿಧಿ ಯಾವುದಾದರೂ ಯೋಜನೆಯಲ್ಲಿ ಮೃತರ ಕುಟುಂಬಕ್ಕೆ ಸೂಕ್ತವಾದ ಪರಿಹಾರವನ್ನು ಆದಷ್ಟು ಬೇಗ ಕೊಡಿಸಲಾಗುವುದು. 

ಪುತ್ರ ವಿಯೋಗ ಬಹಳ ಕೆಟ್ಟದ್ದು. ದೇವರು ಆ ಕುಟುಂಬದವರಿಗೆ ದುಖಃ ಭರಿಸುವ ಶಕ್ತಿಯನ್ನು ನೀಡಲಿ. ಈ ದುರಂತದಲ್ಲಿ ಶವ ಹೊರತೆಗೆಯಲು ಡಿಸಿ, ಎಸಿ, ಡಿವೈಎಸ್ ಪಿ, ಸಿಪಿಐ, ತಹಶಿಲ್ದಾರ, ಸಾರ್ವಜನಿಕರು, ಎನ್ ಡಿ ಆರ್ ಎಫ್ ಸೇರಿದಂತೆ ಹಲವರು ಸೇರಿ ಅವಿರತವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಶ್ಲಾಘನೀಯ ಎಂದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕುಮಾರ್. ಡಿವೈಎಸ್ಪಿ  ಎಸ್ .ವಿ. ಗಿರೀಶ್.  ಸಿಪಿಐ ಶಂಕರಗೌಡ ಬಸನಗೌಡ, ಯಲ್ಲಾಲಿಂಗ ಪಾಟೀಲ್, ಸುರೇಶ ವಾಡೇದ, ಬಾಳಪ್ಪ ಬಾಗಿ, ಅಜಿತ್ ಸಿಂದೆ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದ ನಾಲ್ವರು ಸಹೋದರರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು