6:40 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು