9:04 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಕೃಷ್ಣಾನದಿ ದುರಂತದಲ್ಲಿ ಮಡಿದ 4 ಮಂದಿ ಸಹೋದರರ ಮನೆಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ್ ಭೇಟಿ

05/07/2021, 08:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬನಸೋಡೆ ಕುಟುಂಬದವರ ಈ ದುರ್ಘಟನೆ ವಿಪತ್ತು ಪರಿಹಾರ ನಿಧಿ ವ್ಯಾಪ್ತಿಗೆ ಬರುವುದಿಲ್ಲ, ಆದರೆ ನಮ್ಮ ಸರಕಾರದ ಯಾವುದಾದರೊಂದು ಯೋಜನೆಯಡಿ ಖಂಡಿತವಾಗಿ ಬನಸೋಡೆ ಕುಟುಂಬಕ್ಕೆ ಪರಿಹಾರ ಕೊಡಿಸ್ತೀವಿ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಈ ಕುಟುಂಬಕ್ಕೆ ಖಂಡಿತವಾಗಿ ಪರಿಹಾರ ಕೊಡಿಸ್ತಿವಿ ಜೊತೆಗೆ ಅವರ ಮಕ್ಕಳ ವಿದ್ಯಾಭ್ಯಾಸವನ್ನು ಸರಕಾರಿ ವಸತಿ ಶಾಲೆಯಲ್ಲಿ ಉನ್ನತ ಶಿಕ್ಷಣದವರೆಗೆ ಶಿಕ್ಷಣ ಕೊಡಿಸುವ ಜವಾಬ್ದಾರಿ ನಮ್ಮದು, ಮೇಲಾಗಿ ಈ ಕುಟುಂಬದ ಹಿನ್ನಲೆ ಕೇಳಿ ಬಹಳ ದುಖಃವಾಗಿದೆ ಹಾಗೂ ಈ ಘಟನೆ ಸಂಭವಿಸಿದ ಕ್ಷಣದಿಂದ ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತದ ಜೊತೆ ಅಥಣಿ ತಾಲೂಕಿನ ಶಾಸಕರು ಹಾಗೂ ಉಪಮುಖ್ಯ ಮಂತ್ರಿಗಳಾದ ಲಕ್ಷ್ಮಣ ಸವದಿ ಅವರು ನಮ್ಮ ಜೊತೆ ನಿರಂತರ ಸಂಪರ್ಕದಲ್ಲಿದ್ದರು, ಈ ವಿಷಯ ತಿಳಿಸುತ್ತಿದ್ದಂತೆ ನಾವು ಮಹಾರಾಷ್ಟ್ರದ ಕೊಲ್ಲಾಪುರ್ ಜಿಲ್ಲಾಧಿಕಾರಿ ಜೊತೆಯಲ್ಲಿ ಮಾತನಾಡಿ ಸ್ಥಳಕ್ಕೆ ನುರಿತ ಈಜುಗಾರರನ್ನು ಕಳಿಸಿದೆವು ಎಂದು ತಿಳಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.

ಈ ವೇಳೆ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್, ಉಪತಶಿಲ್ದಾರ ಮಹಾದೇವ್  ಬಿರಾದಾರ್, ಡಿವೈಎಸ್ಪಿ ಎಸ್ ವಿ ಗಿರೀಶ್, ಪಿಎಸ್ಐ ಕುಮಾರ್ ಹಾಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಮುದುಕನ ಸೇಗುಣಸಿ, ಯಲ್ಲಾಲಿಂಗ್ ಪಾಟೀಲ್, ರಮೇಶ್ ಮಾಂಗ್, ಅಪ್ಪಣ್ಣ ಸನದಿ, ಗ್ರಾಮ ಲೆಕ್ಕಾಧಿಕಾರಿ ಶಿವಾನಂದ ಜಾಯಗೋಣಿ, ಸಂತೋಷ ಪಾರ್ಥನಳ್ಳಿ, ವಿಠ್ಠಲ ಕಾಂಬಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು