9:34 PM Friday26 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

06/07/2021, 18:02

ಮಂಗಳೂರು(reporterkarnataka news):

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ.

ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಲಾಕ್ ಡೌನ್ ಮಾರ್ಗಸೂಚಿ ಸಡಿಲಿಕೆಗೊಂಡು ಶೇ. 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಖಾಸಗಿ ಬಸ್ ದರ ಏರಿಕೆ ಪ್ರಸ್ತಾಪ ಹಿಂಪಡೆಯಲಾಗಿದೆ. ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಜು. 1ರಿಂದ ಅನ್ವಯವಾಗುವಂತೆ ಶೇ. 20ರಷ್ಟು ಹೆಚ್ಚಿಸಲಾಗಿತ್ತು. ಲಾಕ್ ಡೌನ್ ಅವಧಿ ವರೆಗೆ ಈ ದರ ಪಡೆಯುವಂತೆ ಬಸ್ ಮಾಲಕರಿಗೆ ಸೂಚಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಆಗಿರುವ ಕಾರಣ ಬಸ್ ಗಳಲ್ಲಿ ಹಳೆಯ ದರವನ್ನೇ ಪಡೆಯಬೇಕು ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಆರ್.ಟಿ.ಎ ಸಭೆ ನಡೆಸಲಾಗುವುದು. ಸಭೆಯಲ್ಲಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಸಗಿ ಬಸ್ ಮಾಲಕರೊಂದಿಗೆ ಈ ಕುರಿತು ಸಭೆ ನಡೆಸಲಾಗಿದ್ದು, ದರ ಏರಿಕೆ ಹಿಂಪಡೆಯಲು ಬಸ್ ಮಾಲಕರು ಒಪ್ಪಿಕೊಂಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡಬೇಕು ಎಂಬುದು ಬಸ್ ಮಾಲಕರ ಬೇಡಿಕೆಯಾಗಿದೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು