12:19 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ವಿನ್ಯಾಸ ಅನುಮೋದನೆ ಶುಲ್ಕ ಕಡಿತ: ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಸಂತಸ

08/07/2021, 09:53

ಮಂಗಳೂರು(reporterkarnataka news):

ನಗರ ಯೋಜನಾ ವಿಭಾಗಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆ ಶುಲ್ಕವನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದರು.

ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ಮನಗಂಡು ಈ ಬಗ್ಗೆ ಶುಲ್ಕವನ್ನು ಪರಿಷ್ಕರಿಸುವಂತೆ ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಸರಕಾರಕ್ಕೆ ದಿನಾಂಕ ೩೧-೦೮-೨೦೨೦ ನಿರ್ಣಯಿಸಿ ಪತ್ರ ಬರೆಯಲಾಗಿತ್ತು. ಈ ಮನವಿಯನ್ನು ಪರಿಗಣಿಸಿ 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರು ಜನಸಾಮಾನ್ಯರ ಸಮಸ್ಯೆಯನ್ನು ಪರಿಗಣಿಸಿ ಶುಲ್ಕ ಕಡಿಮೆಗೊಳಿಸಿ ಆದೇಶ ನೀಡಿದ್ದಾರೆ. ಆದೇಶವನ್ನು ಹೊರಡಿಸುವಲ್ಲಿ ಕಾರಣೀಕರ್ತರಾದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ , ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಅವರಿಗೆ ಧನ್ಯವಾದಗಳು ಎಂದು ಮಿಜಾರ್ ನುಡಿದರು.ಮುಡಾ ಕಮಿಷನರ್ ದಿನೇಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು