11:25 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮಗೆ ಸನ್ಮಾನ,  ಓದಿಗೆ ನೆರವು: ಶ್ರೀದೇವಿ ನಾಯಕ್ ಭರವಸೆ

09/07/2021, 08:01

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಜಕ್ಕಲದಿನ್ನಿ ಗ್ರಾಮದ ದಿಟ್ಟ ರೈತ ವಿದ್ಯಾರ್ಥಿನಿ ಹುಲಿಗೆಮ್ಮ ಅವರನ್ನು ಭೇಟಿಯಾದ ಸಾಮಾಜಿಕ ಕಾರ್ಯಕರ್ತೆ ಶ್ರೀದೇವಿ ನಾಯಕ್ ಅವರು ಆಕೆಯನ್ನು ಸನ್ಮಾನಿಸಿ ಓದಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಹುಲ್ಲಿಗೆಮ್ಮ ತನ್ನ ತಂದೆ ಭೀಮಣ್ಣ ನಿಧನದ ನಂತರ ಇಡಿ ಕುಟುಂಬವನ್ನು ನಿರ್ವಹಿಸುತ್ತಾಳೆ. ಈಕೆ ಕಾಲೇಜಿನಲ್ಲಿ ಓದಿಕೊಂಡು ಮತ್ತು ಹೊಲದಲ್ಲಿ
ಟ್ರಾಕ್ಟರು ಹೊಡಿಯುವದು, ಕುಂಟೆ ಹೊಡಿಯುವದು, ರಸಾಯನಿಕ ಎಣ್ಣೆ ಸಿಂಪರಣೆ ಮಾಡುವದು, ಇನ್ನೂ  ಆನೇಕ  ಕೆಲಸಗಳನ್ನು ನಿರ್ವಹಿಸುತ್ತಾಳೆ.  ಇಂತಹ  ದಿಟ್ಟ ರೈತ ವಿದ್ಯಾರ್ಥಿನಿ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾಳೆ. ಇಂತಹ ಸಾಧನೆ  ಮಾಡಿದ ರೈತ ವಿದ್ಯಾರ್ಥಿಯನ್ನು  ಮನೆಗೆ ಭೇಟಿ ನೀಡಿ ಮುಂದಿನ ಓದಿಗಾಗಿ ಏನೇ  ಸಹಾಯ ಬೇಕಾದರೂ ನಾನು ಮಾಡುತ್ತೇನೆ ಎಂದು ಶ್ರೀದೇವಿ ನಾಯಕ್ ನುಡಿದರು.

ಮುಂದೆ ಯಾವುದೇ ಕಷ್ಟ ಬಂದರೂ ನಿನ್ನ ಜೊತೆ ನಾನು ಯಾವಾಗಲೂ ಇರುತ್ತೇನೆ ಎಂದು ಶ್ರೀದೇವಿ ನಾಯಕ್ ಧೈರ್ಯ ತುಂಬಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು