7:53 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ನೀರುಮಾರ್ಗ: ಕಾಂಗ್ರೆಸ್ ನಿಂದ ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ

09/07/2021, 16:33

ಸುರತ್ಕಲ್ (reporterkarnataka news): ನೀರುಮಾರ್ಗ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ನೀರುಮಾರ್ಗ ಜಂಕ್ಷನ್ ಬಳಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಅವರು ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಭೇದವನ್ನು ಮರೆತು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವ ಮೂಲಕ ಜನಸೇವೆಯನ್ನು ಮಾಡುತ್ತಿವೆ. 

 ಜನಸೇವೆ ಮಾಡಲು ಅಧಿಕಾರವಿರಬೇಕೆಂದಿಲ್ಲ. ಮಾನವೀಯ ಗುಣ ಮುಖ್ಯವಾಗುತ್ತದೆ. ಈ ಭಾಗದ ಪುಟ್ಟ ಬಾಲಕಿ ಕ್ಲಾವಿಯ ಅಗ್ನೇಲ್ ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದು ಅವಳ ಹೆತ್ತವರ ಆಸೆಯಂತೆ ಇಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ನೀರುಮಾರ್ಗದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಜನರಿಗೆ ನೆರವು ನೀಡುವ ಉದ್ದೇಶದಿಂದ ತಿಂಗಳ ಹಿಂದೆ ಆಂಬುಲೆನ್ಸ್ ಸೇವೆ ಪ್ರಾರಂಭ ಮಾಡಿದ್ದೆವು. ಬಡವರ್ಗದ ಜನರು ತುರ್ತು ಸಂದರ್ಭದಲ್ಲಿ ಸಮಸ್ಯೆ ಎದುರಿಸಬಾರದು ಎಂಬ ದೃಷ್ಟಿಯಿಂದ ಈ ಸೇವೆಯನ್ನು ಪ್ರಾರಂಭ ಮಾಡುತ್ತಿದ್ದೇವೆ. ಅಧಿಕಾರ ಇದ್ದಾಗ ಮಾತ್ರ ಜನರ ಜೊತೆಯಿದ್ದರೆ ಸಾಲದು. ಅಧಿಕಾರವಿಲ್ಲದಿದ್ದರೂ ಜನರ ಜೊತೆ ನಿಲ್ಲಬೇಕು ಎಂದು ಹೇಳಿದರು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇವಲ ರಾಜಕಾರಣ ಮಾಡದೇ ಅನೇಕ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ. ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ 20 ಕಡೆಗಳಲ್ಲಿ ರಕ್ತದಾನ ಮಾಡಿ 2500 ಯುನಿಟ್ ರಕ್ತ ಸಂಗ್ರಹ ಮಾಡಿದ್ದಲ್ಲದೆ ಆಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಜನರಿಗೆ ನೆರವಾಗಿದೆ. ತುರ್ತು ಸೇವೆಗೆ ಆಂಬುಲೆನ್ಸ್ ಗೆ ಕೈಜೋಡಿಸಿದ ಎಲ್ಲರ ಕಾರ್ಯ ಶ್ಲಾಘನೀಯವೆಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಗುರುಪುರ ವಲಯ ಅಧ್ಯಕ್ಷ ಸುರೇಂದ್ರ ಕಾಂಬ್ಳಿ ಧರ್ಮ ಗುರು ಫಾ. ಜೋಸೆಫ್ ಮಸ್ಕರೇನಸ್, ಧರ್ಮಗುರು‌ ಜಿ ಐ ಎಸ್ ಇಸ್ಮಾಯಿಲ್, ಸಮಾಜ ಸೇವಕ ಎಮ್ ಪ್ರೇಮಚಂದ್ರ ಭಟ್, ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಧನವಂತಿ, ನೀರುಮಾರ್ಗ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ‌ ಯಶೋಧ ಜೆ ಸಾಲ್ಯಾ‌ನ್ ಉಪಸ್ಥಿತರಿದ್ದರು.

ಶ್ರೀಧರ್ ಸ್ವಾಗತಿಸಿದರು. ಸಂತೋಷ್ ಡಿ ಪಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು