6:27 PM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಉಡುಪಿ ಕೃಷ್ಣಾಪುರ ಶ್ರೀಗಳ ಭಾವೀ ಪರ್ಯಾಯ  ಮಹೋತ್ಸವಕ್ಕೆ ಭಾರಿ ಸಿದ್ಧತೆ: ಕಟ್ಟಿಗೆ ಮುಹೂರ್ತ ಸಂಪನ್ನ

11/07/2021, 17:11

ಉಡುಪಿ(reporterkarnataka news): ಭಾವಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ನಡೆಯುವ ನಾಲ್ಕು ಪ್ರಮುಖ ವಿಧಿ ವಿಧಾನಗಳಲ್ಲೊಂದಾದ ಕಟ್ಟಿಗೆ ಮುಹೂರ್ತ ಭಾನುವಾರ ಭಕ್ತಿ ಸಡಗರದಿಂದ ಉಡುಪಿಯಲ್ಲಿ ನಡೆಯಿತು. ಅಷ್ಟ ಮಠದ ಯತಿಗಳು, ಪುರೋಹಿತರು, ವೈದಿಕರು ಉಪಸ್ಥಿತರಿದ್ದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ನಾಲ್ಕನೇ ಪರ್ಯಾಯ ಮಹೋತ್ಸವ ಮುಂದಿನ ವರ್ಷ ಜನವರಿ 18ರಂದು ನಡೆಯಲಿದೆ.

ಅಷ್ಟ ಮಠಗಳ ಯತಿಗಳಲ್ಲಿ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಅತ್ಯಂತ ಹಿರಿಯವರಾಗಿದ್ದಾರೆ. ಅವರ ಪರ್ಯಾಯಕ್ಕೆ ಪೂರ್ವಭಾವಿಯಾಗಿ ಕಟ್ಟಿಗೆ ಮುಹೂರ್ತ ಭಾನುವಾರ ನಡೆಯಿತು. ಕಟ್ಟಿಗೆಯ ರಥವನ್ನೇ ಉಡುಪಿ ಮಠದ ಪರಿಸರದಲ್ಲಿ ನಿರ್ಮಿಸಲಾಗುತ್ತದೆ.

ಕೃಷ್ಣಾಪುರ ಮಠದ ಭಾವಿ ಪರ್ಯಾಯದ ಅಂಗವಾಗಿ ಕಳೆದ ಡಿಸೆಂಬರ್ 1ರಂದು ಕೃಷ್ಣಾಪುರ ಮಠದ ಪರಿಸರದಲ್ಲಿ ಬಾಳೆ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವದ ಸಂದರ್ಭದಲ್ಲಿ ನಡೆಯುವ ಅನ್ನದಾಸೋಹಕ್ಕೆ ಬಾಳೆ ಎಲೆ ಪೂರೈಕೆಯ ಸಂಕೇತವಾಗಿ ಬಾಳೆ ಮುಹೂರ್ತ ನಡೆಸಲಾಗುತ್ತದೆ. ಮಾರ್ಚ್ 17ರಂದು ಅಕ್ಕಿ ಮುಹೂರ್ತ ನಡೆದಿತ್ತು. ಪರ್ಯಾಯ ಮಹೋತ್ಸವಕ್ಕೆ ಬೇಕಾಗುವಷ್ಟು ಅಕ್ಕಿಯನ್ನು ಸಂಗ್ರಹಿಸಿಡುವ ಸಂಕೇತವಾಗಿ ಅಕ್ಕಿ ಮುಹೂರ್ತ ನಡೆಸಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು