6:51 AM Saturday27 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಮಣ್ಣು ತೆಗೆಯುವ ಜೆಸಿಬಿಯಿಂದ ಚರಂಡಿ ತುಂಬಿದ ನೀರು ಎತ್ತುವುದು!!: ಮಂಗಳೂರು ಸ್ಮಾರ್ಟ್ ಸಿಟಿಗೆ ಈ ಬಾರಿ ಪ್ರಶಸ್ತಿ ಗ್ಯಾರಂಟಿ! 

13/07/2021, 22:07

ಮಂಗಳೂರು(reporterkarnatakanews): ಮಂಗಳೂರು ಸ್ಮಾರ್ಟ್ ಸಿಟಿ ತಂತ್ರಜ್ಞಾನದಲ್ಲಿ ಎಷ್ಟೊಂದು ಮುಂದುವರಿದಿದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಮಣ್ಣು ಅಗೆಯುವುದು ಜೆಸಿಬಿಯಿಂದ ಇಲ್ಲಿನ ಎಂಜಿನಿಯರ್ ಹಾಗೂ ಗುತ್ತಿಗೆದಾರರು ಹೊಂಡ, ಚರಂಡಿಯಲ್ಲಿ ನಿಂತ ಮಳೆ ನೀರನ್ನು ತೆಗೆಯುತ್ತಾರೆ!


ನಗರದ ಸ್ಟೇಟ್ ಬ್ಯಾಂಕ್ ಬಳಿಯ ರಸ್ತೆಗೆ ಒಳಚರಂಡಿ ನಿರ್ಮಿಸುವ ಕಾರ್ಯ ತಿಂಗಳುಗಟ್ಟಲೆಯಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಕಳೆದ ಮೂರು ದಿನಗಳಿಂದ ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸ್ಮಾರ್ಟ್ ಸಿಟಿಯಡಿ ಅಗೆದು ಹಾಕಿದ ಹೊಂಡಗಳಲ್ಲಿ ಕೆಸರು ನೀರು ತುಂಬಿದೆ. ಕಳೆದ ಕೆಲವು ದಿನಗಳಿಂದ ಚರಂಡಿ ತುಂಬಿದ ನೀರನ್ನು ಜೆಸಿಬಿ ಮೂಲಕ ಖಾಲಿ ಮಾಡುವ ಕೆಲಸ ನಡೆಯುತ್ತಿದೆ. ಆದರೆ ಜೆಸಿಬಿ ಮೂಲಕ ಎತ್ತಿ ಅಲ್ಲೇ ಬದಿಗೆ ಸುರಿಯುವ ನೀರು ಮತ್ತೆ ಅದೇ ಚರಂಡಿ ಸೇರುತ್ತಿದೆ. ಆಧುನಿಕ ತಂತ್ರಜ್ಞಾನ ಬಳಕೆಗೆ ಈ ಬಾರಿ ಮಂಗಳೂರು ಸ್ಮಾರ್ಟ್ ಸಿಟಿಗೆ ಪ್ರಶಸ್ತಿ ಗ್ಯಾರಂಟಿ ಎಂದು ಸಾರ್ವಜನಿಕರು ಆಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು