2:00 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ: ತುಂಬಿ ಹರಿದ ನೇತ್ರಾವತಿ, ಕುಮಾರಧಾರಾ; ಚೇಳ್ಯಡ್ಕ ಸೇತುವೆ ಮುಳುಗಡೆ, ಕುಕ್ಕೆ ಸ್ನಾನಘಟ್ಟ 2ನೇ ದಿನವೂ ಜಲಾವೃತ

15/07/2021, 18:06

ಮಂಗಳೂರು(reporterkarnataka news); ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಬಿರುಸಿನ ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿಗಳು, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿದೆ. ಪವಿತ್ರಾ ಯಾತ್ರಾ ಸ್ಥಳವಾದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಪುತ್ತೂರು- ಪಾಣಾಜೆ ಸಂಪರ್ಕಿಸುವ ಚೇಳ್ಯಡ್ಕ ಸೇತುವೆ ಭಾರಿ ಮಳೆಗೆ ಮುಳುಗಡೆಯಾಗಿ ಜನ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ, ಕುಮಾರಧಾರ, ಫಲ್ಗುಣಿ, ನಂದಿನಿ, ಶಾಂಭವಿ ಹಾಗೂ ಪಯಸ್ವಿನಿ ತುಂಬಿ ಹರಿಯುತ್ತದೆ. ಹಳ್ಳ-ಕೊಳ್ಳಗಳು ಕೂಡ ನೀರಿನಿಂದ ತುಂಬಿವೆ. ಧರ್ಮಸ್ಥಳದಲ್ಲಿ ನಿನ್ನೆ ನೇತ್ರಾವತಿ ರುದ್ರರೂಪ ತಾಳಿತ್ತು. ಆದರೆ ಯಾವುದೇ ಅನಾಹುತ ಉಂಟು ಮಾಡದೆ ನಂತರ ಶಾಂತವಾಯಿತು.

ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸ್ನಾನಘಟ್ಟ ಎರಡನೇ ದಿನವಾದ ಇಂದು ಕೂಡ ಮುಳುಗಿದೆ. ಜಿಲ್ಲೆಯ ಹಲವೆಡೆ ಗುಡ್ಡ ಕುಸಿದ ಬಗ್ಗೆ ವರದಿಯಾಗಿದೆ. ಪುತ್ತೂರು ನಗರದಲ್ಲಿ ಗುರುವಾರ ಧರೆ ಕುಸಿದು ಎರಡು ಮನೆಗಳಿಗೆ ಅಪಾಯ ಉಂಟಾಗಿದೆ. ಕುಮಾರಧಾರಾ ಮತ್ತು ನೇತ್ರಾವತಿ ಸಂಗಮ ಸ್ಥಳವಾದ ಉಪ್ಪಿನಂಗಡಿಯಲ್ಲಿ ನದಿ ನೀರಿನ ಮಟ್ಟ ಅಪಾಯದ ಮಟ್ಟದತ್ತ ಸಾಗುತ್ತಿದೆ. ಈಗಾಗಲೇ ನದಿ ನೀರಿನ ಮಟ್ಟ 27.5. ಅಡಿಗೆ ತಲುಪಿದೆ. 30 ಅಡಿ ಅಪಾಯದ ಮಟ್ಟವಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಹಾಗೂ ಕಂದಾಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಎರಡು ಬೋಟು ಹಾಗೂ ಮೂವರು ನುರಿತ ಈಜುಗಾರರ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು