7:12 PM Wednesday24 - April 2024
ಬ್ರೇಕಿಂಗ್ ನ್ಯೂಸ್
ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ… ತಂತ್ರಜ್ಞಾನ ಅಭಿವೃದ್ಧಿಯಾಗಿದ್ದರೂ ಚುನಾವಣೆ 60 ದಿನಗಳ ಕಾಲ ನಡೆಯುತ್ತಿರುವುದು ಅನುಮಾನಾಸ್ಪದ: ಮಾಜಿ ಸಿಎಂ… ಸಿದ್ದರಾಮಯ್ಯ ಸರಕಾರದಲ್ಲಿ ಬದುಕಿನ ಗ್ಯಾರಂಟಿ ಕಳೆದುಕೊಂಡ ಕನ್ನಡಿಗರು: ಶಾಸಕ ಡಾ. ವೈ ಭರತ್…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು