4:46 PM Saturday20 - April 2024
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಕರ್ಕಶ ಹಾರ್ನ್ ಗಳ ಕಿರಿಕಿರಿ ತಪ್ಪಿಸಲು ಪೊಲೀಸ್ ಕಾರ್ಯಾಚರಣೆ: ಹಾರ್ನ್ ಕಿತ್ತೆಸೆದು… ಎಡಪದವು: ಅಂಗಡಿಗೆ ಗುದ್ದಿದ ಲಾರಿಯಿಂದ ಸರಣಿ ಅಪಘಾತ; ಬಸ್, ಕಾರು, ಸ್ಕೂಟರ್ ಜಖಂ;… ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ…

ಇತ್ತೀಚಿನ ಸುದ್ದಿ

ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ: ಲಕ್ಷ್ಮಣ ರಾವ್ ಚಿಂಗಳೆ

16/07/2021, 07:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನನಿತ್ಯ ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರುತ್ತಿದೆ. ಏಳು ವರ್ಷದ ಬಿಜೆಪಿ ಅವರ ಆಳ್ವಿಕೆಯಲ್ಲಿ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಿಂದಾಗಿ ಬಡಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ಚಿಕ್ಕೋಡಿ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ ಆಕ್ರೋಶ ವ್ಯಕ್ತಪಡಿಸಿದರು.


ನಂತರ ಅಥಣಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಅಥಣಿ ತಾಲೂಕಿನಲ್ಲಿ ತೈಲ್ ಬೆಲೆ ಖಂಡಿಸಿ ಇದು 8ನೇ ಪ್ರತಿಭಟನೆಯಾಗಿದ್ದು, ಇಡೀ ವಿಶ್ವದ ವಿವಿಧ ದೇಶಗಳಲ್ಲಿ ತೈಲ ಬೆಲೆ 50 ರೂ ಆಸುಪಾಸಿನಲ್ಲಿದೆ. ಆದರೆ ನಮ್ಮಲ್ಲಿ ಮಾತ್ರ 100 ರೂಪಾಯಿ ಗಡಿ ದಾಟಿದ್ದು ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದರು. 

ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ  ಕೇವಲ 50 ಪೈಸೆ ಹೆಚ್ಚಾದರೆ ದೊಡ್ಡ ದೊಡ್ಡ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿಯ ಅನೇಕ ಮುಖಂಡರು, ಮಾಜಿ ಪ್ರಧಾನಿ ಮನಮೋಹನ ಸಿಂಗ ಅವರಿಗೆ ಬೆಲೆ ಇಳಿಸಿ ಎಂದು ಬಳೆಗಳನ್ನು ಕಳಿಹಿಸಿದ್ದರು‌, ಇದೀಗ ನಾವು ಕೂಡ ಮೋದಿಯವರಿಗೆ ಬಳೆಗಳನ್ನು ಕಳಿಸುತ್ತೇವೆ, ಈ ಸರ್ಕಾರದ ಆಳ್ವಿಕೆಯಲ್ಲಿ ಅಂಬಾನಿ ಅದಾನಿ ಅವರು ಮಾತ್ರ ಆರಾಮವಾಗಿದ್ದಾರೆ ಎಂದು ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು.


ಈ ಪ್ರತಿಭಟನೆ ಜಾಥಾದಲ್ಲಿ ಕಾಂಗ್ರೆಸ್ ಮುಖಂಡರಾದ ಧರೆಪ್ಪ ಠಕ್ಕಣ್ಣವರ, ಬಸವರಾಜ ಬುಟಾಳಿ, ಸುನೀಲ್ ಸಂಕ, ಅಸ್ಲಮ್ ನಾಲಬಂದ, ರಾವಸಾಬ ಐಹೊಳೆ, ಶಿವಾನಂದ ಗುಡ್ಡಾಪೂರ, ಬಸವರಾಜ ಗುಮಟಿ, ರಾಜು ಜಮಖಂಡಿಕರ, ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಯಲ್ಲಪ್ಪ ಶಿಂಗೆ, ಗೌತಮ‌ ಪರಾಂಜಪೆ, ಶ್ರೀಶೈಲ ಮೇತ್ರಿ, ತೌಸಿಫ್ ಸಾಂಗಲೀಕರ, ಸಚಿನ ಬುಟಾಳಿ, ಪ್ರಮೋದ ಬಿಳ್ಳೂರ, ಗುಲಾಬ ನಾಲಬಂದ, ಬಾಬು ಖೆಮಲಾಪೂರೆ, ಅಕ್ಷಯ ಅಸ್ಕಿ, ಸಚಿನ ಬಡಕಂಬಿ, ಸಯ್ಯದ ಗಡ್ಡೇಕರ, ಉಮರ ಸಯ್ಯದ, ರವಿ ಬಡಕಂಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು