1:02 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಬಸ್ ಸಂಚಾರ ಮಾರ್ಗ ಬದಲಾವಣೆ: ಸಾರ್ವಜನಿಕರಿಂದ ದೂರು; ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ

16/07/2021, 07:56

ಮಂಗಳೂರು(reporterkarnataka news): ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆಯ ಕುರಿತು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸಿಬ್ಬಂದಿಗಳಲ್ಲಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ‌ಶಾಸಕ ಕಾಮತ್, ಬಸ್ ಮಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಮಾರ್ಗ ಬದಲಾವಣೆಯ ಕುರಿತು ಒಪ್ಪಿಗೆ ಸೂಚಿಸಿದ ಬಳಿಕವೇ ಬಸ್ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ವರೆಗೆ ಬಸ್ ಮಾಲಕರ ಸಂಘದ ಪ್ರಮುಖರು ಆಗುತ್ತಿರುವ ತೊಂದರೆಯ ಕುರಿತು ನನ್ನ ಬಳಿ ಚರ್ಚಿಸಿಲ್ಲ. ಆ ಬಳಿಕ ಸಾರ್ವಜನಿಕವಾಗಿ ಸಮಸ್ಯೆಯ ಕುರಿತು ಮಾಹಿತಿ ದೊರೆತ ಕೂಡಲೆ ಬಸ್ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.

ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿ ನಡೆಸಿದ್ದೇನೆ. ಕೆಲವು ಕಡೆಗಳಲ್ಲಿ ರಸ್ತೆ ವಿಭಜಕಗಳನ್ನು ತೆರವುಗೊಳಿಸುವುದು ಸೇರಿದಂತೆ ಒಂದಷ್ಟು ಬದಲಾವಣೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದಂತೆ ಸರಿಪಡಿಸಲು ತಿಳಿಸಿದ್ದೇನೆ. ಸಂಚಾರಿ ಪೋಲಿಸರೊಂದಿಗೂ ಕೂಡ‌ ಈ ವಿಚಾರದ ಕುರಿತು ಸಭೆ ನಡೆಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಮೇಯರ್ ಹಾಗೂ ಸ್ಥಳೀಯ ಮನಪಾ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಮುತಾಲಿಬ್, ವಸಂತ್ ಜೆ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು