10:26 PM Wednesday8 - May 2024
ಬ್ರೇಕಿಂಗ್ ನ್ಯೂಸ್
ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ…

ಇತ್ತೀಚಿನ ಸುದ್ದಿ

ಬಕ್ರೀದ್ ಹಬ್ಬವನ್ನು ಸರಕಾರದ ನಿಯಮಾನುಸಾರ ಆಚರಿಸಿ: ಪೊಲೀಸ್ ಕಮೀಷನರ್ ಶಶಿಕುಮಾರ್

17/07/2021, 20:22

ಸುರತ್ಕಲ್(reporterkarnataka news): ಕೋವಿಡ್ ನ ಮಹಾಮಾರಿಯಿಂದಾಗಿ ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾರ್ವಜನಿಕ ನಿರ್ಬಂಧ ಹೇರಲಾಗಿತ್ತು‌. ಆದರೆ ಲಾಕ್ ಡೌನ್ ಸಡಿಲವಾದ ಬಳಿಕ ಎಲ್ಲಕ್ಕೂ ವಿನಾಯಿತಿ ನೀಡಲಾಗಿದೆ. ತ್ಯಾಗ ಬಲಿದಾನ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸರಕಾರದ ನಿಯಾನುಸಾರ ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಹಿತದೃಷ್ಟಿಯಿಂದ ಎಲ್ಲಾ ಪ್ರಮುಖ ಮಸೀದಿಗಳಿಗೂ ಭೇಟಿ ನೀಡಿ ಹೆಚ್ಚು ಜನ ಸೇರದೆ, ಅಗತ್ಯ ನಿಯಮಗಳನ್ನು ಪಾಲಿಸಿ ಹಬ್ಬ ಆಚರಿಸಲು ಮಸೀದಿಯ ಆಡಳಿತ ಮಂಡಳಿಯವರಿಗೆ ಮಾಹಿತಿಯನ್ನು ನೀಡಲಾಗಿದೆ ಎಂದು ಮಂಗಳೂರು ಪೊಲೀಸ್  ಕಮಿಷನರ್ ಎನ್. ಶಶಿಕುಮಾರ್ ಹೇಳಿದರು. 

ಅವರು ಕೃಷ್ಣಾಪುರ 7ನೇ ವಿಭಾಗದ ಬದ್ರಿಯಾ ಜುಮ್ಮಾ ಮಸೀದಿ, ಕೇಂದ್ರ ಜಮಾತ್ ನಲ್ಲಿ ಆಡಳಿತ ಮಂಡಳಿಯವರಿಗೆ ಸರಕಾರದ ನಿಯಮದ ಕುರಿತು ಮಾಹಿತಿ ನೀಡುತ್ತಾ ಹಬ್ಬದ ಸಂದರ್ಭದಲ್ಲಿ 5೦ ಜನರಿಗಿಂತ ಅಧಿಕ ಜನರು ಸೇರದೇ, ಸಾಮಾಜಿಕ ಅಂತರವನ್ನು ಕಾಪಾಡಬೇಕು.

ಸರಕಾರದ ನಿಯಮವನ್ನು ಪ್ರತಿಯೊಬ್ಬರು ಪಾಲಿಸತಕ್ಕದ್ದು. ಕೋವಿಡ್ ನಿಯಮಾವಳಿಗಳನ್ನು ಗಾಳಿಗೆ ತೂರದೇ ಎಲ್ಲರೂ ಪಾಲಿಸಬೇಕು.

ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶಾಂತಿ ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸದಾ ಸಿದ್ಧವಾಗಿದೆ‌‌ ಎಂದರು‌. 

ಡಿಸಿಪಿ ಬಿ.ಪಿ ದಿನೇಶ್ ಕುಮಾರ್, ಪಣಂಬೂರು ಎಸಿಪಿ ಮಹೇಶ್ ಕುಮಾರ್, ಸುರತ್ಕಲ್ ಠಾಣಾಧಿಕಾರಿ ಕೆ. ಚಂದ್ರಪ್ಪ, ಖತೀಬ್ ಉಮ್ಮರ್ ಫಾರೂಕು, ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಅಧ್ಯಕ್ಷ ಜಲೀಲ್ ಬದ್ರಿಯಾ ಹಾಗೂ ಬದ್ರಿಯಾ ಜುಮ್ಮಾ ಮಸೀದಿ ಕೇಂದ್ರಿಯ ಜಮಾತ್ ಪದಾಧಿಕಾರಿಗಳು ಮತ್ತು ಸಮಿತಿ ಸದಸ್ಯರು‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು