8:18 PM Friday19 - April 2024
ಬ್ರೇಕಿಂಗ್ ನ್ಯೂಸ್
ಈ ಚುನಾವಣೆ ಎರಡು ಸಿದ್ದಾಂತಗಳ ನಡುವಿನ ಹೋರಾಟ; ಸಂವಿಧಾನ, ಪ್ರಜಾತಂತ್ರ ಉಳಿವಿಗೆ ಕಾಂಗ್ರೆಸ್… ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ…

ಇತ್ತೀಚಿನ ಸುದ್ದಿ

ಉಪ್ಪಿನಕೋಟೆ ವಿಶಾಲ ಗಾಣಿಗ ಬರ್ಬರ ಕೊಲೆ ಪ್ರಕರಣ: ಪತಿಯೇ ಹಂತಕನೇ? ಪೊಲೀಸ್ ತನಿಖೆ ಏನು ಹೇಳುತ್ತಿದೆ? 

20/07/2021, 08:07

ಬ್ರಹ್ಮಾವರ(reporterkarnataka news): ಇಲ್ಲಿಗೆ ಸಮೀಪದ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಗೃಹಿಣಿಯ ಕೊಲೆ ಪ್ರಕರಣದಲ್ಲಿ ಆಕೆಯ ಪತಿಯೇ ಭಾಗಿಯಾಗಿರುವ ಕುರಿತು ಪೊಲೀಸ್ ಇಲಾಖೆಗೆ ಮಹತ್ವದ ಮಾಹಿತಿ ಲಭ್ಯವಾಗಿದೆ ಎಂದು ತಿಳಿದು ಬಂದಿದೆ.

ವಿಶಾಲಾ ಅವರ ಪತಿ ರಾಮಕೃಷ್ಣ ಗಾಣಿಗ ಅವರು ದುಬೈನಲ್ಲಿದ್ದುಕೊಂಡೇ ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದಾರೆ. ಬಾಡಿಗೆ ಹಂತಕರಿಗೆ ಸುಪಾರಿ ನೀಡಿ ಈ ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ.

ಗುಜ್ಜಾಡಿ ನಾಯಕವಾಡಿಯ ನಿವಾಸಿ ವಾಸು ಗಾಣಿಗರ ಪುತ್ರಿ ವಿಶಾಲ ಗಾಣಿಗ ಉಪ್ಪಿನಕೋಟೆಯ ಅಪಾರ್ಟ್ಮೆಂಟ್ ನಲ್ಲಿ ಜುಲೈ 12ರಂದು ಕೊಲೆಯಾಗೀಡಾಗಿದ್ದರು.

ಹೊರ ರಾಜ್ಯದಲ್ಲಿ ಅಡಗಿ ಕುಳಿತ್ತಿದ್ದ ಇಬ್ಬರು ಹಂತಕರನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ತಂಡ ರಚಿಸಲಾಗಿತ್ತು. ರಾಮಕೃಷ್ಣ ಗಾಣಿಗನೇ ಕೊಲೆಗೆ ಸುಪಾರಿ ನೀಡಿರುವುದಾಗಿ ಹಂತಕರೇ ತಿಳಿಸಿದ್ದಾರೆ ಎನ್ನಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು