11:20 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ…

ಇತ್ತೀಚಿನ ಸುದ್ದಿ

ಬೆಳಗಾವಿ: ಉಕ್ಕಿ ಹರಿಯುತ್ತಿದೆ ನದಿಗಳು; ಹೆದ್ದಾರಿ ಸೇತುವೆ ಜಲಾವೃತ, ಪ್ರಯಾಣಿಕರ ಪರದಾಟ

23/07/2021, 22:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಳಗಾವಿಯ ನದಿಗಳೆಲ್ಲ ಉಕ್ಕಿಹರಿಯುತ್ತಿವೆ. ಹಳ್ಳ ಕೊಳ್ಳ ತುಂಬಿದ್ದು, ಒಂಟಮುರಿ‌ ಘಾಟಿ ಬಳಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಜಲಾವೃತಗೊಂಡಿದೆ.

ಪ್ರವಾಹದಿಂದ ಜನರು ದಿಕ್ಕೆಟ್ಟು ಹೋಗಿದ್ದಾರೆ. ನದಿ ಮತ್ತು ರಸ್ತೆಯ ವ್ಯತ್ಯಾಸ ಕಾಣುತ್ತಿಲ್ಲ. ವಾಹನಗಳನ್ನು ರಸ್ತೆ ಬದಿ ನಿಲ್ಲಿಸಿ ಪ್ರಯಾಣಿಕರು ನದಿಯಲ್ಲಿ ಪ್ರವಾಹ ಇಳಿಯಲು ಕಾಯುತ್ತಿದ್ದಾರೆ.

ಪ್ರಯಾಣಿಕರಿಗೆ ದಿಕ್ಕು ತೋಚದಂತೆ  ರಸ್ತೆ ಮೇಲೆ ನೀರು ಹರಿದು ಬಂದು ಇದು ನದಿನಾ ಅಥವಾ ರಸ್ತೆ ನಾ ಅಂತಾ ತಿಳಿಯದೇ ತಮ್ಮ ತಮ್ಮ ಸಣ್ಣ ವಾಹಾನಗಳು ರಸ್ತೆ ಬದಿಗೆ ನೀಲಿಸಿ ನೀರಿನ ರಭಸ ಕಡಿಮೇ ಆಗುವ ನೀರಿಕ್ಷೆಯಲ್ಲಿ‌ ಕಾದುಕೊಳ್ಳಿತ್ತಿದ್ದಾರೆ,

ಇನ್ನೂ ಲಾರಿ ಚಾಲಕರು ಭಾರ ಹೆಚ್ಚಿರುವುದರಿಂದ ನೀರಿನ ಮೇಲೆಯೇ ಸವಾರಿ ಮಾಡುತ್ತಿದ್ದಾರೆ. ಇಲ್ಲಿ ನೀರು ಹರಿದು‌ ಹೋಗಲು ಸರಾಗ ಮಾರ್ಗ ಇಲ್ಲದ ಕಾರಣ ರಸ್ತೆ ಮೇಲೆ ನೀರು ನುಗ್ಗಿ ಪ್ರತಿ ವರ್ಷ ವು ಮಳೆಗಾಲದಲ್ಲಿ‌ ಇಂಥಹ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು‌ ವಾಹನ ಶುಲ್ಕ ಭರಿಸಿಕೊಳ್ಳುತ್ತಾರೆ. ಆದರೆ ಇಲ್ಲಿ ಆಗುವ ಸಂಭವಗಳ ಬಗ್ಗೆ ‌ಗಮನ ಹರಿಸುವುದಿಲ್ಲ. ಕೇವಲ ಹಣ ಮಾಡಲು ಮಾತ್ರ ಈ ಹೆದ್ದಾರಿ ಸೀಮಿತವಾಗಿದೆ ಅಂತಾ ಹೇಳಿದರು‌ ತಪ್ಪೆನಿಲ್ಲ. ಇನ್ನಾದರೂ ಎಚ್ಚತ್ತುಕೊಂಡು‌ ಇಂತಹ ಸಮಸ್ಯೆಗಳನ್ನು ಆಲಿಸಿ ರಸ್ತೆ ಸಂಚಾರಕ್ಕೆ ಸುಗಮಗೊಳಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು