7:33 AM Friday19 - April 2024
ಬ್ರೇಕಿಂಗ್ ನ್ಯೂಸ್
ನಂಜನಗೂಡಿನಲ್ಲಿ ಸಂಭ್ರಮ- ಸಡಗರದ ಶ್ರೀ ರಾಮೇಶ್ವರ ರಥೋತ್ಸವ, ಜಾತ್ರಾ ಮಹೋತ್ಸವ ಬೈಕಿಗೆ ಕಾರು ಡಿಕ್ಕಿ: ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು ರಾಮೇಶ್ವರ ದೇಗುಲಕ್ಕೆ ಮಾಜಿ ಪ್ರಧಾನಿ ದೇವೇಗೌಡ ಭೇಟಿ; ವಿಶೇಷ ಪೂಜೆ ಸಲ್ಲಿಕೆ; ಬಿಜೆಪಿ… ದಕ್ಷಿಣ ಕನ್ನಡ ಜಿಲ್ಲೆ ಮತ್ತೊಮ್ಮೆ ಕಾಂಗ್ರೆಸಿನ ಭದ್ರಕೋಟೆಯಾಗಲಿದೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಏ.24ರಂದು ಉಡುಪಿಗೆ: ಕೋಟ ಪರ ರೋಡ್… ವಿಜಯಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ನಾಮಪತ್ರ ಸಲ್ಲಿಕೆ: ಬೃಹತ್… ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ಮೇಳೈಸಿದ ಈಶಾನ್ಯ ಭಾರತ ಮತ್ತು ಟಿಬೆಟ್‌ನ ಶ್ರೀಮಂತ ಸಂಸ್ಕೃತಿಗಳ… ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ…

ಇತ್ತೀಚಿನ ಸುದ್ದಿ

ಮಳೆ ಬಂದ್ರೆ ನರಕಯಾತನೆ ಅನುಭವಿಸುವ  ಜನರು !: ಕ್ಯಾರೆ ಎನ್ನದ ಅಧಿಕಾರಿಗಳು; ಜನರ ಗೋಳು ಕೇಳುವವರ್ಯಾರು?

23/07/2021, 08:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಬಳಗನೂರು ಸಮೀಪದ ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದ್ರೆ ಇಡೀ ವಾರ್ಡಿನ ಜನರಿಗೆ ನದಿ ದಾಟುವಂತ ಪರಿಸ್ಥಿತಿ ಎದುರಾಗುತ್ತದೆ.

ಗ್ರಾಮಗಳ ಸುರಕ್ಷತೆಗಾಗಿ ಸರಕಾರದಿಂದ ಸಾಕಷ್ಟು ಯೋಜನೆಗಳಿದ್ದರೂ ಅದು ಹೇಗೆ ಬಳಕೆಯಾಗುತ್ತಿಲ್ಲ ಎನ್ನುವುದಕ್ಕೆ ಇದು ಸಣ್ಣ ಉದಾಹರಣೆಯಾಗಿದೆ.


ಬೆಳಗಿ ನೋರು ಗ್ರಾಮದಲ್ಲಿ ಮಳೆ ಬಂದರೆ ವೃದ್ಧರು, ಗರ್ಭಿಣಿಯರು , ಮಕ್ಕಳು ನರಕಯಾತನೆ ಅನುಭವಿಸುತ್ತಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ ಇದೆಲ್ಲ ಗೊತ್ತಿದ್ದರೂ ಗೊತ್ತಿಲ್ಲದಂತೆ ಸುಮ್ಮನಾಗಿದ್ದಾರೆ. ಜನರ ಕೂಗು ಕೇಳುವವರ್ಯಾರು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಗೌಡನಬಾವಿ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಗ್ರಾಮ ಪಂಚಾಯತಿ ಸದಸ್ಯರು ಇದರ ಬಗ್ಗೆ ಗಮನಹರಿಸುವ ಅಗತ್ಯವಿದೆ. ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಸ್ಥಳೀಯ ಗ್ರಾಮದ ಸಮಸ್ಯೆಯನ್ನು ಬಗೆಹರಿಸುವ ಮೂಲಕ ನರಕಯಾತನೆ ಅನುಭವಿಸುತ್ತಿರುವ ತಿಪ್ಪಯ್ಯ ಸ್ವಾಮಿ ಸಾಲಿಮಠ ಅವರ ವಾರ್ಡಿನ ನೀರನ್ನು ಹೋಗುವುದಕ್ಕೆ ಅನುಕೂಲ ಮಾಡಿ ಆ ವಾರ್ಡಿನ ಗ್ರಾಮದ ಜನರಿಗೆ ದಾರಿದೀಪ ವಾಗಬೇಕೆಂದು ವಾರ್ಡಿನ ಜನರು ಒತ್ತಾಯಿಸಿದ್ದಾರೆ. ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು ಇದನ್ನು ಯಾವಾಗ ಕಾರ್ಯರೂಪಕ್ಕೆ ತರುತ್ತಾರೆ ಎಂಬುದನ್ನು ಕಾದುನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು