3:47 PM Tuesday16 - April 2024
ಬ್ರೇಕಿಂಗ್ ನ್ಯೂಸ್
ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ: ಗಣ್ಯರ ಸಂತಾಪ ಮರೆಯಾದ ‘ಪಾಡ್ದನ ಕೋಗಿಲೆ’: ಜನಪದ ಸಾಹಿತ್ಯದ ವಿಶ್ವಕೋಶ, ಪಾಡ್ದನ ತಜ್ಞೆ ಗಿಡಿಗೆರೆ ರಾಮಕ್ಕ… ಕಾರು ಬಿಟ್ಟು ಆಟೋ ಏರಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ: ಗಮನ… ಮಂಗಳೂರಿನಲ್ಲಿ ನಾಳೆ ‘ಇಂಡಿಯಾ’ ಘಟಕ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ‘ಬಿಜೆಪಿ… ವಿಜಯ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್‌ ಎಲ್ಲಿಗೆ ಹೋಯಿತು?; ಬಿಜೆಪಿ ನಾಯಕರು ಉತ್ತರಿಸಲಿ: ಮಾಜಿ… ಪ್ರಧಾನಿ ಮೋದಿ ರೋಡ್ ಶೋ: ಏರ್ ಪೋರ್ಟ್ ನಿಂದ ಲೇಡಿಹಿಲ್ ವರೆಗೆ ಎಸ್… ದ.ಕ.ಲೋಕಸಭೆ: ತಗ್ಗಿತೇ ಬಿಜೆಪಿ ಪ್ರಚಾರ?: ದಿನ ಕಳೆದಂತೆ ಸ್ಟ್ರಾಂಗ್ ಆಗುತ್ತಿದೆಯೇ ಪದ್ಮರಾಜ್ ಟೀಮ್… ಪೋಷಕರ ನಿರ್ಲಕ್ಷ್ಯ: ಏರ್ ಗನ್ ನಲ್ಲಿ ಶೂಟ್ ಮಾಡಿಕೊಂಡು 7 ವರ್ಷದ ಬಾಲಕ… ಬಾಳೆಹೊನ್ನೂರು ಭಾಗದಲ್ಲಿ ಭಾರೀ ವರ್ಷಧಾರೆ: ಕಾದ ನೆಲಕ್ಕೆ ತಂಪೆರಚಿದ ಮಳೆ; ಕೃಷಿಕರ ಮೊಗದಲ್ಲಿ… ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ…

ಇತ್ತೀಚಿನ ಸುದ್ದಿ

ಮೊಟ್ಟೆಯಲ್ಲಿ ಕಮಿಷನ್ :  ಅಥಣಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಭಾರಿ ಪ್ರತಿಭಟನೆ

26/07/2021, 14:10

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜನ ಪ್ರವಾಹ ಸಂಕಷ್ಟದಲ್ಲಿ ತತ್ತರಿಸಿ ಸಾವು ನೋವಿನ ನಡುವೆ ಇದ್ದರೆ ಬಿಜೆಪಿಯವರು ಅಪೌಷ್ಟಿಕ ಮಕ್ಕಳ ಹಾಗೂ ಗರ್ಭಿಣಿ ಹೆಣ್ಣು ಮಕ್ಕಳಿಗೆ ವಿತರಿಸ ಬೇಕಾದ ಆಹಾರಧಾನ್ಯ ಹಾಗೂ ಮೊಟ್ಟೆ ವಿತರಣೆಯಲ್ಲಿಯೂ ಕೂಡ ಹಣ ತಿನ್ನುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆಪಾದಿಸಿದರು.


ಅವರು ಸೋಮವಾರ ಅಥಣಿ ಮಿನಿ ವಿಧಾನಸೌಧ ಅಥಣಿ ಆವರಣದಲ್ಲಿ ಅಥಣಿ ಹಾಗೂ ತೆಲಸಂಗ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು ಮಾಡಲು ಗುತ್ತಿಗೆದಾರರಿಂದ ಪ್ರತಿ ತಿಂಗಳು ಒಂದು ಕೋಟಿ ರೂಪಾಯಿ ಕಮಿಷನ್ ಗೆ ಬೇಡಿಕೆಯಿಟ್ಟ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ  ಶಶಿಕಲಾ ಜೊಲ್ಲೆಯವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿ ತಹಸಿಲ್ದಾರ್
ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಈ ಹಿಂದೆ ಪ್ರವಾಹ ಬಂದಾಗ ಮುಂಬೈಯಲ್ಲಿದ್ದ ಬಿಜೆಪಿ ಜನಪ್ರತಿನಿಧಿಗಳು ಈಗ ಮುಖ್ಯಮಂತ್ರಿ ಬದಲಾವಣೆ ವಿಷಯ ಹಿಡಿದು ರಾಜಕಾರಣ ಮಾಡ್ತಿದ್ದಾರೆ ಹೊರತು ಪ್ರವಾಹ ಪೀಡಿತ ಜನರತ್ತ ನೋಡ್ತಿಲ್ಲ. ಸಾಮಾನ್ಯ ಜನ ಅಷ್ಟೆ ಅಲ್ಲ ಬಿಜೆಪಿಯವರೆ ಭ್ರಷ್ಟ ಪಕ್ಷ ಎಂದು ಹೇಳ್ತಿದ್ದಾರೆ, ಬಡವರ ಹೊಟ್ಟೆಗೆ ಮತ್ತು ಮಕ್ಕಳಿಗೆ ಕೊಡಬೇಕಾದ ಆಹಾರಧಾನ್ಯದಲ್ಲಿ ಕನ್ನ ಹಾಕುವುದು ನಿಮಗೆ ನಾಚುಕೆ ಯಾಗುವುದಿಲ್ಲವೆ ಎಂದು ಶಶಿಕಲಾ ಜೊಲ್ಲೆ ಅವರನ್ನು ಉದ್ದೇಶಿಸಿ ಹೇಳಿದರು.

ಅಥಣಿ ಭಾಗ ಸುಮಾರು 22 ಹಳ್ಳಿಗಳು ಪ್ರವಾಹದಿಂದ ಬಾಧಿತವಾಗಿವೆ ಇದನ್ನು ಕೇಳದ ಸರಕಾರ ತಮ್ಮ ಹಗರಣದಲ್ಲಿ ತೊಡಗಿವೆ ಎಂದು ನುಡಿದರು.

ನಂತರ ಮಾತನಾಡಿದ ತೆಲಸಂಗ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಾಂತ ಪೂಜಾರಿ, ಇಡೀ ದೇಶದಲ್ಲಿ ಅತೀ ಭ್ರಷ್ಟ ಸರಕಾರ ಎಂದರೆ ಅದು ಬಿಜೆಪಿ ಪಕ್ಷ, ಅಪೌಷ್ಠಿಕ ಮಕ್ಕಳು ತಿನ್ನುವಂತಹ ಆಹಾರ ಧಾನದಲ್ಲಿಯೂ ಭ್ರಷ್ಟಾಚಾರ ಮಾಡಿ ಮೊಟ್ಟೆ ಕಮೀಷನ್ ಪಡೆಯುತ್ತಿರುವುದು ತೀರಾ ನಾಚಿಗೇಡಿತನ. ಇಂತಹ ಸಚಿವರನ್ನೂ ಯಡಿಯೂರಪ್ಪನವರು ಕೂಡಲೇ ವಜಾ ಗೊಳಿಸಿಬೇಕು ಎಂದು ಆಗ್ರಹಿಸಿದರು.

ನಂತರ ಅಥಣಿ ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.


ಈ ವೇಳೆ ಎಸ್ ಕೆ ಬುಟಾಳಿ, ಬಸವರಾಜ ಬುಟಾಳಿ, ರಾವಸಾಬ ಐಹೊಳೆ, ಅನೀಲ ಸುಣಧೋಳಿ, ಸುನೀಲ ಸಂಕ,  ಶಿವಾನಂದ ಸಂಕ, ಅಸ್ಲಮ ನಾಲಬಂದ, ಬಸವರಾಜ ಠಕ್ಕಣ್ಣವರ, ರಾಜು ಜಮಖಂಡಿಕರ, ಗೌತಮ‌ ಪರಾಂಜಪೆ, ತೌಸಿಫ್ ಸಾಂಗಲೀಕರ್, ಪ್ರಕಾಶ ಕೋಳಿ, ಸುರೇಶ ಕೊಳಂಬಿ, ಚಿದಾನಂದ ಮುಕಣಿ, ಆಕಾಶ ಬುಟಾಳಿ, ಬಸವರಾಜ ಹಳ್ಳದಮಳ, ರವಿ ಬಕಾರಿ, ಸಿದ್ದು ಕೋಕಟನೂರ, ಸಚಿನ ಬುಟಾಳಿ, ರವಿ ಬಡಕಂಬಿ, ಸಚಿನ ಬಡಕಂಬಿ, ಸಲಾಂ ಕಲ್ಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು