12:06 PM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ನಡುಗಡ್ಡೆಯಲ್ಲಿ ಪರದಾಡುತ್ತಿರುವ ಬಡ ಕುಟುಂಬಗಳು: ತಿರುಗಿ ನೋಡದ ಜನಪ್ರತಿನಿಧಿಗಳು, ಅಧಿಕಾರಿಗಳು!!

26/07/2021, 09:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸತತವಾಗಿ ಸುರಿಯುತ್ತಿರುವ ಮಳೆಯಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಲಿಂಗಸಗೂರು ತಾಲೂಕಿನ ಶೀಲಹಳ್ಳಿ ದೊಡ್ಡಿಯ ಜನರು ಸಂಕಷ್ಟ ಎದುರಿಸುವಂತಾಗಿದೆ.ಜನರ ಸಂಕಷ್ಟಕ್ಕೆ ಸ್ಪಂದಿಸುವಲ್ಲಿ ತಾಲೂಕು ಹಾಗೂ ಜಿಲ್ಲಾಡಳಿತ ವಿಫಲವಾಗಿದೆ.

ರಕ್ಷಣೆ ತಂಡ ಜತೆ ತಾಲೂಕು ಆಡಳಿತ ಆಗಮಿಸಿದಾಗ ಗ್ರಾಮಸ್ಥರು ಹಿಗ್ಗಾಮುಗ್ಗಾ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿ ವರ್ಷ ಮಳೆ ಬರುವಾಗ ಇವರು ಸಂಕಷ್ಟ ಎದುರಿಸುತ್ತಾರೆ.

ನೆರೆ ಸಂತ್ರಸ್ತರಿಗೆ ಪರಿಹಾರವೇ ಇಷ್ಟರವರೆಗೆ ದೊರಕಿಲ್ಲ.ಬರೀ ಆಶ್ವಾಸನೆ ನೀಡುತ್ತಾ ಜನಪ್ರತಿನಿಧಿಗಳು ಮತ್ತು ಅಧಿಕಾರಿ ಬಂದಿದ್ದಾರೆ. 

ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಬಳಿಕ ಅಧಿಕಾರಿ ಸ್ಥಳಕ್ಕಾಗಮಿಸುತ್ತಾರೆ. ತಹಶೀಲ್ದಾರ್ ಚಾಮರಾಜ ಪಾಟೀಲ್ ಬೇಜವಾಬ್ದಾರಿ ಕೆಲಸ ಮಾಡುತ್ತಿದ್ದಾರೆಂದು ಸಾರ್ವಜನಿಕರು ಆರೋಪಿಸುತ್ತಾರೆ.


ನಡುಗಡ್ಡೆ ನಿರಾಶ್ರಿತರಿಗೆ 25000 ಅನುದಾನ ನೀಡುವುದಾಗಿ ಭರವಸೆ ನೀಡಿದರು. ಸಹಾಯಕ ಆಯುಕ್ತರು ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಮಳೆಗಾಲದಲ್ಲಿ ಗರ್ಭಿಣಿಯರಿಗೆ, ವೃದ್ಧರಿಗೆ ಬಹಳ ತೊಂದರೆಯಾಗುತ್ತಿದೆ. ಹಳ್ಳ ನೀರು ಖಾಲಿಯಾಗುವವರೆಗೂ ಕಾಯುವ ಪರಿಸ್ಥಿತಿ ಇಲ್ಲಿ ಕುಟುಂಬಗಳಿಗೆ ಎದುರಾಗಿದೆ. ಸುಮಾರು ಬಡ ಕುಟುಂಬಗಳು ಈ ದೊಡ್ಡಿಯಲ್ಲಿ ವಾಸವಾಗಿದೆ. ಮಳೆ ಬಂದರೆ ಇವರ ಕಥೆ ಮುಗಿಯಿತು.

ಆ ಕಡೆಯಿಂದ ಈ ಕಡೆಗೆ ಬರುವ ಮಾತೇ ಇಲ್ಲ . ಮಕ್ಕಳು ಶಾಲೆಗೆ ಹೋಗೋದೇ ಇಲ್ಲ. ರಸ್ತೆ ಕಡಿತಗೊಳ್ಳುತ್ತದೆ. ಶಾಸಕರು ಮಾತ್ರ ಮೌನಕ್ಕೆ ಶರಣಾಗುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು