1:55 AM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ಜಲಾವೃತಗೊಂಡ ಮನೆಯಿಂದ ಸಾಮಗ್ರಿ ಸ್ಥಳಾಂತರ ವೇಳೆ ದುರ್ಘಟನೆ: ಪ್ರವಾಹಕ್ಕೆ ಕೊಚ್ಚಿ ಹೋದ ರೈತ

27/07/2021, 13:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸವದಿ ಗ್ರಾಮದ ವಾಡಾ ಬಸವೇಶ್ವರ ದೇವಸ್ಥಾನ ಸಮೀಪ ಮನೆಯ ಸಾಮಗ್ರಿ, ದನಕರು ಸ್ಥಳಾಂತರ ವೇಳೆ ನದಿಯ ನೀರಿನಲ್ಲಿ ಸವದಿ ಗ್ರಾಮದ ರಾಮಗೌಡ ಸಿದಗೌಡ ಪಾಟೀಲ(55) ಕೊಚ್ಚಿ ಹೋದ ದುರ್ಘಟನೆ ಭಾನುವಾರ ಸಂಜೆ ನಡೆದಿದೆ.

ಘಟನಾ ಸ್ಥಳಕ್ಕೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಹಾಗೂ ಚಿಕ್ಕೋಡಿ ಸಹಾಯಕ ಕಮಿಷರ್ ಯುಕೇಶ ಕುಮಾರ ಬೇಟಿ ನೀಡಿ ಘಟನೆಯ ಮಾಹಿತಿ ಪಡೆದರು.ಕುಟುಂಬದ ಸದಸ್ಯರಿಗೆ ದೈರ್ಯ ತುಂಬಿದರು.


ಅನಂತರ ಮಾತನಾಡಿದ ಶಾಸಕ ಮಹೇಶ ಕುಮಟಳ್ಳಿ, ಹೆಚ್ಚಾದ ನೀರಿನ ಸೆಳೆತದಿಂದ ಎಲ್ಲೆಲ್ಲಿ ಕಬ್ಬು ಬೆಳೆಯಲಾಗಿದೆಯೋ ಅಲ್ಲೆಲ್ಲಾ ಕೆಸರು ಬಂದಿದ್ದು, ಸಾರ್ವಜನಿಕರು ವಿನಾಃ ಕಾರಣ ನೀರಿಗೆ ಇಳಿಯಬಾರದು. ಹಾಗೆ ಪ್ರವಾಹದ ಬಗ್ಗೆ ಎಲ್ಲ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ತಾಲೂಕಿನ ಅಧಿಕಾರಿಗಳಿಗೆ ತಿಳಿಸಿದರು.


ಈ ವೇಳೆ ಮಲಗೌಡ ಪಾಟೀಲ, ತಹಶೀಲ್ದಾರ ದುಂಡಪ್ಪಾ ಕೋಮಾರ, ತಾಪಂ ಅಧಿಕಾರಿ ಶೇಖರ ಕರಬಸಪ್ಪಗೋಳ, ಡಿವೈಎಸ್ಪಿ ಎಸ್ ವಿ ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ, ಉಪತಹಶಿಲ್ದಾರ ಮಹಾದೇವ ಬಿರಾದಾರಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು