5:43 AM Thursday25 - April 2024
ಬ್ರೇಕಿಂಗ್ ನ್ಯೂಸ್
ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ… ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏ.26ರಂದು ವಿಜಯಪುರಕ್ಕೆ: ರಾಜು ಆಲಗೂರ ಪರ ಚುನಾವಣಾ… ಬರ ಪರಿಹಾರ ನೀಡದಿದ್ದರೆ ಪ್ರಧಾನಿ ಹಾಗೂ ಗೃಹ ಸಚಿವರಿಗೆ ರಾಜ್ಯಕ್ಕೆ ಬರಲು ಜನತೆ…

ಇತ್ತೀಚಿನ ಸುದ್ದಿ

ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? 

27/07/2021, 17:50

ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ.

ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದ ಬಳಿಕ ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್ ಈಗಾಗಲೇ ಮುಖ್ಯಮಂತ್ರಿ ಯಾರಾಗಬೇಕೆನ್ನುವುದನ್ನು ನಿರ್ಧರಿಸಿದ್ದು, ಶಾಸ್ತ್ರಕಷ್ಟೇ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ನಡೆಸಲಾಗುತ್ತದೆ ಎನ್ನಲಾಗಿದೆ. ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ ಹೈಕಮಾಂಡ್ ಸಂಸ್ಕೃತಿಯ ಪಕ್ಷಗಳು ಮೊದಲಿನಿಂದಲೂ ಹೇರುವ ಕ್ರಮವನ್ನೇ ಮಾಡಿಕೊಂಡು ಬಂದಿವೆ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೂ ದೆಹಲಿಯಿಂದ ಚೀಟಿ ಕಳುಹಿಸುವ ಮೂಲಕ ಮುಖ್ಯಮಂತ್ರಿಯ ಆಯ್ಕೆ ನಡೆಸಿತ್ತು. ವಿಶೇವೆಂದರೆ ಅಂದು ಕಾಂಗ್ರೆಸ್ ನ ಹೈಕಮಾಂಡ್ ಸಂಸ್ಕೃತಿಯನ್ನು ಟೀಕಿಸುತ್ತಿದ್ದ ಬಿಜೆಪಿ ಇದೀಗ ಕಾಂಗ್ರೆಸ್ ನ್ನು ಓವರ್ ಟೇಕ್ ಮಾಡಿದೆ. ಈ ನಡುವೆ ಹೊಸ ಸಿಎಂ ಯಾರೆಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸದ ವ್ಯಕ್ತಿಯಿಂದ ಆರಂಭಗೊಂಡು ಕೇಂದ್ರ ಸಚಿವರ ವರೆಗೆ ಹೆಸರು ಕೇಳಿಬರುತ್ತಿದೆ. ಆದರೆ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದಕ್ಕೂ ಸ್ವಲ್ಪ ಕಾದು ನೋಡೋಣ.

ಇತ್ತೀಚಿನ ಸುದ್ದಿ

ಜಾಹೀರಾತು