7:35 PM Tuesday19 - March 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಬಿಜೆಪಿ- ಜೆಡಿಎಸ್ ಮೈತ್ರಿಕೂಟದಲ್ಲಿ ಅಸಮಾಧಾನ: ಸೀಟು ಹಂಚಿಕೆ ಬಗ್ಗೆ ತಕರಾರು; ಪ್ರಧಾನಿ… ಲೋಕಸಭಾ ಚುಣಾವಣೆ: ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸೂಚನೆ ದೇವರಮನೆಯಲ್ಲಿ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರವಾಸಿಗರು ಮೂಡಿಗೆರೆ: ಇಬ್ಬರು ಬಿಜೆಪಿ ಮುಖಂಡರ ಅಮಾನತು ಆದೇಶ ವಾಪಸ್; ಭಿನ್ನಮತ ಉಪಶಮನಕ್ಕೆ ಹಿರಿಯ… ಭಾರತದ ಕಾರು ಮಾಲೀಕರ ನೆಚ್ಚಿನ ಸೂಪರ್ ಆ್ಯಪ್ ಪಾರ್ಕ್+: ಪ್ರಸ್ತುತ ದೇಶದಲ್ಲಿ 1.5… ಕರ್ನಾಟಕವನ್ನು ಲೂಟಿಕೋರರಿಂದ ರಕ್ಷಿಸುತ್ತೇನೆ: ಕಲಬುರಗಿ ಸಂಕಲ್ಪ ಸಮಾವೇಶದಲ್ಲಿ ಪ್ರಧಾನಿ ಮೋದಿ ಘೋಷಣೆ ದೇಶದ ಗದ್ದುಗೆಗೆ ಬಿಗ್ ಫೈಟ್: ಮತ್ತೊಮ್ಮೆ ಮೋದಿ- ರಾಹುಲ್ ಮುಖಾಮುಖಿ; ರಾಜ್ಯದಲ್ಲಿ ಏ.26… ಸಂಸತ್ ಚುನಾವಣೆಯ ದಿನಾಂಕ ನಾಳೆ ಪ್ರಕಟ: ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಲಿದ್ದಾರೆ ಚೀಫ್ ಎಲೆಕ್ಷನ್… ಕಡೂರಿಗೆ ಆಗಮಿಸಿದ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ: ಮೊಮ್ಮಗ ಪ್ರಜ್ವಲ್ ಪರ… ಹಿಂದುತ್ವ ಮತ್ತು ಅಭಿವೃದ್ಧಿಗೆ ನನ್ನ ಆದ್ಯತೆ: ದ.ಕ. ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ…

ಇತ್ತೀಚಿನ ಸುದ್ದಿ

ಸೋತದ್ದು ಯಡಿಯೂರಪ್ಪರಲ್ಲ, ಬಿಜೆಪಿ ಹೈಕಮಾಂಡ್ !: ರಾಜ್ಯದಲ್ಲಿ ಇನ್ನೇನಿದ್ದರೂ ಬಿಎಸ್ ವೈ 2 ಸರಕಾರ !!

28/07/2021, 07:53

ಬೆಂಗಳೂರು(reporterkarnataka news): ಬಸವರಾಜ ಬೊಮ್ಮಾಯಿ ಅವರನ್ನೇ ಮುಖ್ಯಮಂತ್ರಿ ಮಾಡುವುದಾದರೆ ಇಷ್ಟೆಲ್ಲ ರಂಪಾಟ ಮಾಡಿ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಅಗತ್ಯವಿತ್ತೇ..? ಇದು, ಬೊಮ್ಮಾಯಿ ನೂತನ ಮುಖ್ಯಮಂತ್ರಿ ಎಂದು ಬಿಜೆಪಿ ವರಿಷ್ಠರು ಘೋಷಣೆ ಮಾಡಿದ ಕ್ಷಣ ರಾಜ್ಯದ ಜನರಲ್ಲಿ ಮಾತ್ರವಲ್ಲದೆ, ಬಿಜೆಪಿಯೊಳಗೆ ಮೂಡಿ ಬಂದ ಪ್ರಶ್ನೆ. 

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ಹಾಗೂ ಪಕ್ಷದೊಳಗಿನ ಒಂದು ಗುಂಪು ಹಲವು ತಿಂಗಳಿನಿಂದ ಸಾಕಷ್ಟು ಕೆಲಸ ಮಾಡಿತ್ತು. ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ.ಯೋಗೀಶ್ವರ್, ಅರವಿಂದ ಬೆಲ್ಲದ್ ಇವರೆಲ್ಲ ಪಕ್ಷದೊಳಗಿನ ಪ್ರಬಲ ನಾಯಕರ ಬೆಂಗಾವಲಿನಲ್ಲಿಯೇ ಯಡಿಯೂರಪ್ಪ ವಿರುದ್ಧ ಬಂಡಾಯ ಸಾರಿದ್ದರು ಎನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ಗೊತ್ತಿರುವ ವಿಚಾರ. ಈ ನಡುವೆ ಅದಕ್ಕೆ ಪೂರಕ ಎನ್ನುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿತ್ತು. ಮುಖ್ಯಮಂತ್ರಿ ಬದಲಾವಣೆ ಕುರಿತು ಬಹಳಷ್ಟು ಅಬ್ಬರ ತಾಳ ಕೇಳಿ ಬಂದಿತ್ತು. ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಿ ಅವರ ಪ್ರಭಾವವಿಲ್ಲದ ನಾಯಕನನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ರಾಜ್ಯ ಬಿಜೆಪಿಯ ಗುಂಪೊಂದು ಪ್ರಬಲ ಕನಸು ಕಂಡಿತ್ತು. ಆದರೆ ಅದೆಲ್ಲ ನುಚ್ಚುನೂರಾಗಿದೆ. ಯಡಿಯೂರಪ್ಪ ಅವರ ಬಹು ಆಪ್ತ ವಲಯಕ್ಕೆ ಸೇರಿದ ಬೊಮ್ಮಾಯಿ ಅವರನ್ನು ಹೊಸ ಮುಖ್ಯಮಂತ್ರಿಯಾಗಿ ಘೋಷಣೆ ಮಾಡುವ ಮೂಲಕ ಬಿಎಸ್ ವೈ ಅವರನ್ನು ಹೊರತುಪಡಿಸಿ ಕರ್ನಾಟಕದಲ್ಲಿ ರಾಜಕೀಯ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಬಿಜೆಪಿ ಹೈಕಮಾಂಡ್ ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.ಅದಲ್ಲದೆ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಆಯ್ಕೆಯಾದ ತಕ್ಷಣ ಮಾಧ್ಯಮ ಜತೆ ಮಾತನಾಡಿದ ಬೊಮ್ಮಾಯಿ ಅವರು ಯಡಿಯೂರಪ್ಪ ನನ್ನ ರಾಜಕೀಯ ಗುರು. ಅವರ ಮಾರ್ಗದರ್ಶನದಲ್ಲಿ ಕೆಲಸ ಮುಂದುವರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಯಡಿಯೂರಪ್ಪ ಅವರ ಗೆಲುವು ಆಗಿದೆ.

ಮುಂದೆ ಬೊಮ್ಮಾಯಿ ಸರಕಾರದಲ್ಲಿ ಯಡಿಯೂರಪ್ಪ ಅವರ ಮಾತು ನಡೆಯುತ್ತದೆಯೇ ಹೊರತು ಇತರರದ್ದಲ್ಲ ಎನ್ನುವುದು ಕೂಡ ಅಷ್ಟೇ ಸ್ಪಷ್ಟ.

ಇತ್ತೀಚಿನ ಸುದ್ದಿ

ಜಾಹೀರಾತು