7:11 PM Thursday25 - April 2024
ಬ್ರೇಕಿಂಗ್ ನ್ಯೂಸ್
ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಪ್ರಣಾಳಿಕೆ ಬಿಡುಗಡೆ ಹಿಂದೂ ಧರ್ಮ ಸಾಮರಸ್ಯದ ಬದುಕು ಹೇಳಿಕೊಟ್ಟಿದೆ: ಬೈಕಂಪಾಡಿ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ… ಮೋರ್ಗನ್ಸ್ ಗೇಟ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಮತ… ಪ್ರಿಯಾಂಕಾ ಗಾಂಧಿ ಇಂದು ರಾಜ್ಯಕ್ಕೆ: ಚಿತ್ರದುರ್ಗದಲ್ಲಿ ಬಹಿರಂಗ ಸಭೆ; ಹಗರಿಬೊಮ್ಮನಹಳ್ಳಿಯಲ್ಲಿ ಸೌಮ್ಯಾ ರೆಡ್ಡಿ…

ಇತ್ತೀಚಿನ ಸುದ್ದಿ

ಸಜ್ಜನ ರಾಜಕಾರಣಿ ದಿವಂಗತ ಅನಂತ ಕುಮಾರ್ ಪುತ್ರಿ ಏನು ಟ್ವೀಟ್ ಮಾಡಿದರು ಗೊತ್ತೇ?: ಮುಂದಕ್ಕೆ ಓದಿ! 

30/07/2021, 10:55

ಬೆಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರು ಬಿಜೆಪಿಯ ಸರಳ, ಸಜ್ಜನ, ಪ್ರಾಮಾಣಿಕ ನಾಯಕರಲ್ಲಿ ಒಬ್ಬರಾಗಿದ್ದರು. ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಕೂಡ ಪತಿಯ ಹಾದಿಯಲ್ಲೇ ಮುಂದುವರಿಯುತ್ತಿದ್ದಾರೆ. ಅನಂತ ಕುಮಾರ್ ಅವರ ಪುತ್ರಿ ವಿಜೇತಾ ಈಗ ಸುದ್ದಿಯಲ್ಲಿದ್ದಾರೆ. ಟ್ವೀಟ್ ಮಾಡುವ ಮೂಲಕ ಅವರು ರಾಜ್ಯ ಗಮನ ಸೆಳೆದಿದ್ದಾರೆ.

ಅದೇನು ಅಂದ್ರೆ ‘ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂಬ ಟ್ವೀಟ್ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

‘ಕರ್ನಾಟಕದ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಟ್ವೀಟ್ ನಲ್ಲಿ ಪ್ರಶ್ನಿಸಿರುವ ಅವರು ಜೆಡಿಎಸ್ ಇನ್ನೂ ಬಲವಾದ ರಾಜಕೀಯ ಶಕ್ತಿಯಾಗಿದೆ’ ಎಂದು ತನ್ನ ಅಭಿಪ್ರಾಯವನ್ನು ಬಹಿರಂಗಪಡಿಸಿದ್ದಾರೆ.
ವಿಜೇತಾ ಅವರ ಈ ಟ್ವೀಟ್ ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಜೆಡಿಎಸ್ 

ಮೈಸೂರು ಮತ್ತು ಮಂಡ್ಯ ಜಿಲ್ಲೆಗೆ ಸೀಮಿತವಾಗಿದೆ ಎಂದು ಖಾರವಾಗಿ ಎಂದು ಪ್ರತಿಕ್ರಿಯಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು